ರಾಮನಗರ: ಶಾಮಿಯಾನದ ಕಂಬ ಮುಟ್ಟಿದ್ದರಿಂದ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ದುರ್ಘಟನೆ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅಗರ ಗ್ರಾಮದಲ್ಲಿ ಸಂಭವಿಸಿದೆ.
ಕೇರಳದ ತ್ರಿಸೂರು ಮೂಲದ ವಿದ್ಯಾರ್ಥಿ ರೋಷನ್ ರಶೀದ್ (17) ಮೃತ ದುರ್ದೈವಿ. ಕೆಂಗೇರಿ ಹೋಬಳಿಯ ಅಗರ ಗ್ರಾಮದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ನಡೆಯುತ್ತಿದ್ದ ದಕ್ಷಿಣ ವಲಯ ಈಜು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ರೋಷನ್ ಆಗಮಿಸಿದ್ದ. ಈಜು ಸ್ಪರ್ಧೆ ಹಿನ್ನೆಲೆ ಶಾಲಾ ಆವರಣದಲ್ಲಿ ಶಾಮಿಯಾನ ಹಾಕಲಾಗಿತ್ತು.
ಬುಧವಾರ ಶಾಮಿಯಾನದ ಕಂಬ ಮುಟ್ಟಿದ ರೋಷನ್ಗೆ ವಿದ್ಯುತ್ ಪ್ರವಹಿಸಿದ್ದು, ಅಸ್ವಸ್ಥನಾಗಿದ್ದ. ತಕ್ಷಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಮಗನ ಸಾವಿನಿಂದ ನೊಂದಿರುವ ಪಾಲಕರು ಸ್ಪರ್ಧೆ ಆಯೋಜಕರ ವಿರುದ್ಧ ಕಗ್ಗಲಿಪುರ ಠಾಣೆಗೆ ದೂರು ನೀಡಿದ್ದಾರೆ.
ಬಾಳು ಕೊಡ್ತೀನಿ… ಎಂದು ಪುಸಲಾಯಿಸಿ ಆಕೆಯ ಮನೆಯಲ್ಲೇ ಇದ್ದವ ಹೀಗಾ ಮಾಡೋದು? ಎಲ್ಲವನ್ನೂ ಕಳೆದುಕೊಂಡಾಕೆಯ ಗೋಳಿನ ಕಥೆ ಇದು
ಶಿವಮೊಗ್ಗದಲ್ಲಿ ಸಾವಿನ ಮನೆಯ ಕದ ತಟ್ಟಿದ ಖಾಸಗಿ ಆಸ್ಪತ್ರೆ ವೈದ್ಯ! ಕಾರಣ?