ಹಾವೇರಿ: ಕಾಲೇಜು ವಿದ್ಯಾರ್ಥಿಗಳನ್ನ ಹತ್ತಿಸಿಕೊಳ್ಳದೆ ಸರ್ಕಾರಿ ಬಸ್ ಹೋಗಿದ್ದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಸ್ಥಳದಲ್ಲೇ 4 ಬಸ್ಗಳನ್ನ ತಡೆದು ಪ್ರತಿಭಟನೆಗೆ ಕುಳಿತ ಘಟನೆ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗುರುವಾರ ಬೆಳಗ್ಗೆ ಸಂಭವಿಸಿದೆ.
ಶಾಲಾ-ಕಾಲೇಜುಗಳಿಗೆ ಹೋಗುವ ಬಹುತೇಕ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಸಾರಿಗೆ ಸೌಲಭ್ಯ ಸಿಗದೆ ಕಿರಿಕಿರಿ ಅನುಭವಿಸೋದು ತಪ್ಪಿದ್ದಲ್ಲ. ಇಂತಹದ್ದೇ ಘಟನೆ ಬೊಮ್ಮನಹಳ್ಳಿಯಲ್ಲೂ ಸಂಭವಿಸಿದೆ. ಕಾಲೇಜಿಗೆ ಹೋಗಲೆಂದು ಬಂದ ಪಿಯುಸಿ ವಿದ್ಯಾರ್ಥಿಗಳನ್ನು ಬಸ್ನವರು ಹತ್ತಿಸಿಕೊಂಡಿಲ್ಲ. ಇದರಿಂದಾಗಿ ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಹೋಗೊಕೆ ಆಗಿಲ್ಲ. ಸಿಟ್ಟಿಗೆದ್ದ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲೇ ತಾಡಪತ್ರೆ ಹಾಸಿಕೊಂಡು ಪ್ರತಿಭಟನೆಗೆ ಕುಳಿತರು. ಸ್ಥಳಕ್ಕೆ ಹಾನಗಲ್ ಡಿಪೋ ಮ್ಯಾನೇಜರ್ ಬರಬೇಕೆಂದು ಪಟ್ಟು ಹಿಡಿದಿದ್ದ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿದ್ದರು.
ಕಡ್ಡಾಯ ಬಸ್ ನಿಲುಗಡೆ ಸ್ಥಳದಲ್ಲಿ ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದೇ ತೆರಳುತ್ತಿದ್ದ ಸರ್ಕಾರಿ ಬಸ್ವೊಂದನ್ನು ನಡುರಸ್ತೆಯಲ್ಲೇ ಅಡ್ಡಗಟ್ಟಿದ್ದ ಶಿಕ್ಷಣ ಸಚಿವರು ಚಾಲಕ ಮತ್ತು ನಿರ್ವಾಹಕರಿಗೆ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಘಟನೆ ಇತ್ತೀಚಿಗೆ ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ಐ.ಕೆ.ಕಾಲನಿಯಲ್ಲಿ ನಡೆದಿತ್ತು. ಇನ್ಮುಂದೆ ಬಸ್ ನಿಲುಗಡೆ ಸ್ಥಳದಲ್ಲಿ ಬಸ್ ನಿಲ್ಲಿಸಿ ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡೇ ಹೋಗಬೇಕು. ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಾರಿಗೆ ಇಲಾಖೆಗೆ ಪತ್ರ ಬರೆದಿದ್ದರು. ಇಷ್ಟಾದರೂ ವಿದ್ಯಾರ್ಥಿಗಳನ್ನು ಬಸ್ಗೆ ಹತ್ತಿಸಿಕೊಳ್ಳದೆ ಹೋಗುತ್ತಿರುವ ಪ್ರಕರಣ ಕಡಿಮೆಯೇನು ಆಗ್ತುತ್ತಿಲ್ಲ
ಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್ ರೇವಣ್ಣ
ಹೆಣ್ಣೇ ಕೊಡಲ್ಲಾ ಅಂತಾರ್ರಿ… ಏನಾದ್ರೊಂದು ಯೋಜನೆ ತಂದಾದ್ರೂ ನನ್ನಂಥವ್ರಿಗೆ ಮದ್ವೆ ಮಾಡಿಸ್ರಿ ಸಾಹೇಬ್ರೆ…