ಬೆಂಗಳೂರು: ಮೈಸೂರು ರಸ್ತೆಯ ನಾಯಂಡಹಳ್ಳಿ ಮೇಲ್ಸೆತುವೆಯಿಂದ ಯುವಕ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಂತರಪಾಳ್ಯದ ಸುರೇಶ್ (20) ಮೃತ. ಶನಿವಾರ ಸಂಜೆ 4.45ರಲ್ಲಿ ಮೇಲ್ಸೇತುವೆಯಿಂದ ಏಕಾಏಕಿ ಸುರೇಶ್ ಜಿಗಿದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳುನನ್ನು ಸಾರ್ವಜನಿಕರು ಮತ್ತು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಯಾದಗಿರಿ ಜಿಲ್ಲೆಯ ಕೂಲಿ ಕಾರ್ವಿುಕ ಸೈದಪ್ಪ ದಂಪತಿಯ ಪುತ್ರ ಸುರೇಶ್, ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ. ಆತನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರೇಮ ವೈಫಲ್ಯ, ವ್ಯಾಸಂಗದಲ್ಲಿ ಹಿನ್ನಡೆ ಸೇರಿ ಹಲವು ಆಯಾಮಗಳಲ್ಲಿ ತನಿಖೆ ನಡೆದಿದೆ ಎಂದು ಬ್ಯಾಟರಾಯನಪುರ ಪೊಲೀಸರು ತಿಳಿಸಿದ್ದಾರೆ.