ಎಸ್​ಎಸ್​ಎಲ್​ಸಿಯಲ್ಲಿ ಅಂಕ ಕಡಿಮೆ ಬರಬಹುದೇನೋ ಎಂಬ ಭಯದಿಂದ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಶಿವಮೊಗ್ಗ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಅಥವಾ ಫೇಲಾಗಿದ್ದಕ್ಕೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ಹೊಸದೇನಲ್ಲ. ಆದರೆ ಇಲ್ಲೊಬ್ಬಳು ವಿದ್ಯಾರ್ಥಿನಿ ಇನ್ನೂ ಪರೀಕ್ಷೆಯೇ ಮುಗಿದಿಲ್ಲ, ಅದಾಗಲೇ ಅಂಕ ಕಡಿಮೆ ಬರಬಹುದೇನೋ ಎಂಬ ಭಯದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹೊಸನಗರ ತಾಲೂಕು ರಿಪ್ಪನ್​ಪೇಟೆ ಸಮೀಪದ ಕೆಂಚನಾಲ ಗ್ರಾಮದ ವಿದ್ಯಾರ್ಥಿನಿಯೊಬ್ಬಳು ಇಂಥದ್ದೊಂದು ಪ್ರಯತ್ನ ಮಾಡಿ, ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಈಕೆ ರಿಪ್ಪನ್​ಪೇಟೆ ಮೇರಿ ಮಾತಾ ಪ್ರೌಢಶಾಲೆ ವಿದ್ಯಾರ್ಥಿನಿ. ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಮನೆಗೆ ಬಂದಿದ್ದ ವಿದ್ಯಾರ್ಥಿನಿ, ಕಡಿಮೆ ಅಂಕ ಬರುತ್ತದೆ ಎಂಬ … Continue reading ಎಸ್​ಎಸ್​ಎಲ್​ಸಿಯಲ್ಲಿ ಅಂಕ ಕಡಿಮೆ ಬರಬಹುದೇನೋ ಎಂಬ ಭಯದಿಂದ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ