More

    ರೋಗ ತಡೆಗೆ ನೀಡಿದ್ದ ಮಾತ್ರೆ ತಿಂದ ಮಕ್ಕಳು ಅಸ್ವಸ್ಥ!; 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು..

    ಯಾದಗಿರಿ: ಕಲುಷಿತ ನೀರು ಕುಡಿದು, ಬಿಸಿಯೂಟ ತಿಂದು ಶಾಲಾ ಮಕ್ಕಳು ಅಸ್ವಸ್ಥಗೊಂಡ ಪ್ರಕರಣಗಳು ನಡೆದಿವೆ. ಇದೀಗ ಇಲ್ಲೊಂದು ಕಡೆ ರೋಗ ತಡೆಗೆ ನೀಡಿದ್ದ ಮಾತ್ರೆಗಳನ್ನು ತಿಂದ ಮಕ್ಕಳು ಅಸ್ವಸ್ಥಗೊಂಡಂಥ ಪ್ರಕರಣವೂ ವರದಿಯಾಗಿದೆ. ಈ ಘಟನೆಯಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

    ಯಾದಗಿರಿ ತಾಲೂಕಿನ ಶೆಟ್ಟಿಗೆರೆ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಆನೆಕಾಲು ರೋಗ ತಡೆಗೆ ಮಾತ್ರೆಗಳನ್ನು ಸೇವಿಸಿ ಈ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಆನೆಕಾಲು ರೋಗ ಮುಕ್ತ ಮಾಡಲು ಇಂದು ಇವರಿಗೆಲ್ಲ ಮಾತ್ರೆಗಳನ್ನು ನುಂಗಿಸಲಾಗಿತ್ತು.

    ಆದರೆ ಈ ಮಾತ್ರೆಗಳನ್ನು ನುಂಗಿದ ಶೆಟ್ಟಿಗೆರೆ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಲ್ಲಿ 20ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    ಜಗತ್ತಿನ ಜನಸಂಖ್ಯೆ ಕೆಲವೇ ಗಂಟೆಗಳಲ್ಲಿ 800 ಕೋಟಿ; ಭಾರತ ಎಷ್ಟನೇ ಸ್ಥಾನದಲ್ಲಿ?

    ಪುರುಷರೇ ‘ಸೋ ಸ್ವೀಟ್​’, ಮಹಿಳೆಯರಲ್ಲ..!; ಇಲ್ಲಿದೆ ಅಂಕಿ-ಅಂಶ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts