ಮುಂಬೈ: ಕರ್ನಾಟಕದಲ್ಲಿ ಈ ಹಿಂದೆ ಒಮ್ಮೆ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂಬ ಸುದ್ದಿ ಹರಿದಾಡಿತ್ತು. ಬಳಿಕ ಅಂಥ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆ ಕುರಿತು ಇನ್ನೂ ಚರ್ಚೆಗಳು ನಡೆಯುತ್ತಿವೆ, ಸದ್ಯಕ್ಕೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ನಿರ್ಣಯ ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದರು.
1ರಿಂದ 8ನೇ ತರಗತಿ ವರೆಗಿನ ಮಕ್ಕಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂಬ ಸುದ್ದಿ ಇದೀಗ ಹೊರಬಿದ್ದಿದೆ. ಆದರೆ ಈ ಸುದ್ದಿ ಕೇಳಿ ಕರ್ನಾಟಕದ ಮಕ್ಕಳು ಖುಷಿಯಾಗುವಂತಿಲ್ಲ. ಏಕೆಂದರೆ ಇಂಥದ್ದೊಂದು ಸುದ್ದಿ ಕೇಳಿಬಂದಿರುವುದು ಮಹಾರಾಷ್ಟ್ರದಲ್ಲಿ. ಮಹಾರಾಷ್ಟ್ರದಲ್ಲಿ ಕರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 1ರಿಂದ 8ನೇ ತರಗತಿ ವರೆಗಿನ ಮಕ್ಕಳನ್ನು ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಪಾಸ್ ಮಾಡಲಾಗುವುದು. ಹಾಗೆಯೇ 9 ಮತ್ತು 11ನೇ ತರಗತಿ ಮಕ್ಕಳ ಕುರಿತ ನಿರ್ಧಾರ ಸದ್ಯದಲ್ಲೇ ಘೋಷಿಸಲಾಗುವುದು ಎಂದು ಮಹಾರಾಷ್ಟ್ರದ ಶಿಕ್ಷಣ ಸಚಿವೆ ವರ್ಷಾ ಗಾಯಕ್ವಾಡ್ ತಿಳಿಸಿದ್ದಾರೆ.
ಇದನ್ನೂ ಓದಿ: 10 ಲಕ್ಷ ಜನರಿಗೆ ಒಟ್ಟು 1,500 ಕೋಟಿ ರೂ. ಮೋಸ; ಬೆಂಗಳೂರಿನ ಕಂಪನಿಯ 24 ಜನರನ್ನು ಬಂಧಿಸಿದ ಸೈಬರಾಬಾದ್ ಪೊಲೀಸರು
ಸೋಂಕು ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಈಗಾಗಲೇ ಎಲ್ಲ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಕೆಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಮಾಡಲಾಗಿದೆ. ಇನ್ನು ಪರಿಸ್ಥಿತಿ ಸುಧಾರಿಸದೇ ಇದ್ದರೆ ಲಾಕ್ಡೌನ್ ತೆರವುಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಹೇಳಿದ್ದರು.
In view of #COVID19 situation, all state board students across Maharashtra state from Class 1 to Class 8 will be promoted to next class without any exam. A decision regarding students of class 9 and 11 will soon be taken: Varsha Gaikwad, Maharashtra Minister (School Education) pic.twitter.com/Fp9KxbMwfA
— ANI (@ANI) April 3, 2021
ಇಲ್ಲೆಲ್ಲ ಈ ಲಸಿಕೆ ಕೊಡುವುದು ನಿಲ್ಲಿಸಿದ್ದಾರಂತೆ!; ರಕ್ತಹೆಪ್ಪುಗಟ್ಟುತ್ತದೆ ಎಂಬ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ
ನೈಟ್ ಕರ್ಫ್ಯೂ, ವೀಕೆಂಡ್ ಲಾಕ್ಡೌನ್ ಆಗುತ್ತಾ? ಸಚಿವ ಸುಧಾಕರ್ ಏನು ಹೇಳಿದ್ರು ನೋಡಿ…