More

    ಹಾಸ್ಟೆಲ್​ ವಿದ್ಯಾರ್ಥಿಗಳ ಮೇಲೆ ನಿರಂತರ ದೌರ್ಜನ್ಯ; ಸಿಬ್ಬಂದಿ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

    ದಕ್ಷಿಣ ಕನ್ನಡ: ಮೆಟ್ರಿಕ್‌ಪೂರ್ವ ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳ ಮೇಲೆ ಅಡುಗೆ ಸಿಬ್ಬಂದಿ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಈಶ್ವರಮಂಗಲದ ಪಂಚಲಿಂಗೇಶ್ವರ ಮತ್ತು ಗಜಾನನ ಶಾಲೆಯಲ್ಲಿ ನಡೆದಿದೆ.

    ಅಡುಗೆ ಸಿಬ್ಬಂದಿ ಪಿ. ಮಹಮ್ಮದ್ ನಜೀತ್ ಎಂಬುವರು ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಖಂಡಿಸಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

    ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಅಕ್ಷತಾ ಪೈ ವಿದ್ಯಾರ್ಥಿಗಳ ಅಹವಾಲು ಆಲಿಸಿದ್ದು, ಮೇಲಧಿಕಾರಿಗಳ ಗಮನಕ್ಕೆ ತಂದು ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ವಿದ್ಯಾರ್ಥಿಗಳು ಫೆಬ್ರವರಿ 15ರ ಒಳಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts