ಬೆಂಗಳೂರು: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ್ದ ಕೊನೆಯ ದಿನವನ್ನು ಜೂನ್ ೨೦ರವರೆಗೆ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಪಡುತ್ತಿರುವ ಕಷ್ಟದ ಕುರಿತು ‘ಸ್ಕಾಲರ್ಶಿಪ್ ಅರ್ಜಿ ಸಲ್ಲಿಕೆ ಪರದಾಟ’ ಎಂಬ ಶೀರ್ಷಿಕೆಯಡಿ ವಿಜಯವಾಣಿ ಮೇ 31ರಂದು ವಿಶೇಷ ವರದಿ ಪ್ರಕಟಿಸಿತ್ತು.
ಈಗ ಈ ಸಮಸ್ಯೆಗೆ ಪರಿಹಾರ ಕಲ್ಪಿಸಿರುವ ಸಮಾಜ ಕಲ್ಯಾಣ ಇಲಾಖೆ, ಅರ್ಜಿ ಸಲ್ಲಿಸಲು ಇದ್ದ ತಾಂತ್ರಿಕ ಸಮಸ್ಯೆಯನ್ನು ಸರಿ ಪಡಿಸಿ ಅರ್ಜಿ ಸಲ್ಲಿಕೆಗೆ ನಿಗದಿ ಪಡಿಸಿದ್ದ ಕೊನೆಯ ದಿನಾಂಕವನ್ನು ಮೇ 31ರಿಂದ ಜೂ 20ರವರೆಗೆ ವಿಸ್ತರಿಸಿದೆ. ಇದಕ್ಕೆ ವಿದ್ಯಾರ್ಥಿಗಳು ‘ವಿಜಯವಾಣಿ’ಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.