More

    ವಿದ್ಯಾರ್ಥಿಗಳೇ ತಪ್ಪದೆ ಮತದಾನ ಮಾಡಿ

    ಗೋಕಾಕ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಹತ್ವದ ಪಾತ್ರವಹಿಸುತ್ತಿದ್ದು, ಎಲ್ಲರೂ ಮತದಾನ ಮಾಡುವಂತೆ ಎಸ್‌ಎಲ್‌ಜೆ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ಬಿ.ಪಾಟೀಲ ಹೇಳಿದರು.

    ನಗರದ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಪೂರ್ವ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗ ಮತ್ತು ಎನ್‌ಎಸ್‌ಎಸ್ ಘಟಕ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. 18 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಮತದಾನ ಮಾಡುವ ಹಕ್ಕಿದೆ.

    ಪ್ರಜ್ಞಾವಂತ ಮತದಾರರು ಆಸೆ ಆಮಿಷಗಳಿಗೆ ಒಳಗಾಗದೆ ಒಳ್ಳೆಯ ಪ್ರತಿನಿಧಿ ಆಯ್ಕೆಯೊಂದಿಗೆ ದೇಶದ ಅಭಿವೃದ್ಧಿಗೂ ಸಹಕರಿಸಬೇಕು. ಪವಿತ್ರವಾದ ಮತದಾನ ಕಾರ್ಯದಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಕರೆ ನೀಡಿದರು. ಕಾರ್ಯಕ್ರಮದ ನಂತರ ನಗರದ ಪ್ರಮುಖ ಬೀದಿಗಳಲ್ಲಿ ಮತದಾನ ಜಾಗೃತಿ ಜಾಥಾ ನಡೆಸಲಾಯಿತು.

    ಪ್ರಾಚಾರ್ಯ ಐ.ಎಸ್. ಪವಾರ, ಉಪನ್ಯಾಸಕರಾದ ಎಂ.ಯು. ಕಂಬಾರ, ಕೆ.ಬಿ.ಪಾಟೀಲ, ವಿದ್ಯಾರ್ಥಿ ಪ್ರತಿನಿಧಿ ಪ್ರಿಯಾಂಕಾ ಪಾಟೀಲ ಇದ್ದರು. ಲಕ್ಷ್ಮೀ ಕೌಜಲಗಿ ಸ್ವಾಗತಿಸಿದರು. ಕೆ.ಎಸ್.ಗಾಡಿವಡ್ಡರ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts