ಬದಿಯಡ್ಕ: ಕುಂಬಳೆ ಉಪಜಿಲ್ಲಾ ಕೇರಳ ಶಾಲಾ ಒಲಿಂಪಿಕ್ಸ್ ನೀರ್ಚಾಲ್ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆ ಮತ್ತು ಎಲ್.ಪಿ.ಶಾಲೆಯಲ್ಲಿ ಆರಂಭವಾಯಿತು. ಮಂಗಳವಾರ ಕಾಸರಗೋಡು ಸಂಸದ ರಾಜ್ಮೋಹನ್ ಉಣ್ಣಿತ್ತಾನ್ ಕ್ರೀಡಾ ಸ್ಪರ್ಧೆಗಳನ್ನು ಉದ್ಘಾಟಿಸಿದರು.
ಬದಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಾ ಬಿ.ಅಧ್ಯಕ್ಷತೆ ವಹಿಸಿದ್ದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ಜಿಲ್ಲಾ ಪಂಚಾಯಿತಿ ಸದಸ್ಯೆ ಶೈಲಜಾ ಭಟ್, ಬದಿಯಡ್ಕ ಗ್ರಾಪಂ ಉಪಾಧ್ಯಕ್ಷ ಅಬ್ಬಾಸ್ ಎಂ., ಕಾಸರಗೋಡು ವಿದ್ಯಾಭ್ಯಾಸ ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ ವಿ., ಕಾಸರಗೋಡು ಬ್ಲಾಕ್ ಪಂಚಾಯಿತಿ ಸದಸ್ಯೆ ಜಯಂತಿ, ಬದಿಯಡ್ಕ ಗ್ರಾಪಂ ಸದಸ್ಯೆ ಜಯಶ್ರೀ ಪಿ., ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸುಕುಮಾರ ಕುದ್ರೆಪ್ಪಾಡಿ, ಬದಿಯಡ್ಕ ಗ್ರಾಪಂ ಪಿ.ಇ.ಸಿ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್.ಕೆ, ಕುಂಬಳೆ ಉಪಜಿಲ್ಲಾ ಮುಖ್ಯಶಿಕ್ಷಕ ಸಂಘಟನೆಯ ಸಂಚಾಲಕ ವಿಷ್ಣುಪಾಲ ಬಿ., ಕುಂಬಳೆ ಉಪಜಿಲ್ಲಾ ಮಟ್ಟದ ವಿವಿಧ ಚಟುವಟಿಕೆಗಳ ಸಮಿತಿ ಸಂಚಾಲಕ ಸುರೇಂದ್ರನ್ ಎಂ.ವಿ., ಬದಿಯಡ್ಕ ಗ್ರಾಪಂ ಸದಸ್ಯ ಶ್ಯಾಮಪ್ರಸಾದ್ ಮಾನ್ಯ, ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲೆ ಜಯಲಕ್ಷ್ಮೀ ಕೆ., ಬದಿಯಡ್ಕ ಆರೋಗ್ಯ ಸೇವಾ ಕೇಂದ್ರದ ಹೆಲ್ತ್ ಇನ್ಸ್ಪ್ಪೆಕ್ಟರ್ ರಾಜೇಶ್, ಕಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಮಾಲತಿ ವೈ., ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ವಿಜಯಕುಮಾರ್ ಪಿ., ಕುಂಬಳೆ ಉಪಜಿಲ್ಲಾ ದೈಹಿಕ ಶಿಕ್ಷಣ ಸಂಘಟನೆಯ ಕಾರ್ಯದರ್ಶಿ ಸಂತೋಷ್ ಪಿ.ಎಚ್ ಶುಭಾಶಂಸನೆಗೈದರು.
ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶಶಿಧರ ಎಂ.ಸ್ವಾಗತಿಸಿದರು. ಶಾಲಾ ಮುಖ್ಯಶಿಕ್ಷಕ ಶಿವಪ್ರಕಾಶ ಎಂ.ಕೆ.ವಂದಿಸಿದರು.