ರಾಯಚೂರು: ಕರೊನಾ ಸೋಂಕಿನ ಅಟ್ಟಹಾಸ ಮಿತಿಮೀರಿದ್ದು, ಸಾವು-ನೋವಿನ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಲೇ ಇವೆ. ಇದೀಗ ಕೋವಿಡ್ಗೆ ಮಾನ್ವಿಯ ಸಬ್ ರಿಜಿಸ್ಟ್ರಾರ್ ಬಲಿಯಾಗಿದ್ದು, ಈ ಸುದ್ದಿ ಕೇಳಿದ ಮೃತರ ತಾಯಿಯೂ ಆಘಾತಕ್ಕೊಳಗಾಗಿ ಪ್ರಾಣ ಬಿಟ್ಟಿದ್ದಾರೆ.
45 ವರ್ಷದ ಸಬ್ ರಿಜಿಸ್ಟ್ರಾರ್ಗೆ ಜು.24ರಂದು ಕೋವಿಡ್ ದೃಢಪಟ್ಟಿತ್ತು. ಕೂಡಲೇ ಅವರನ್ನು ರಾಯಚೂರಿನ ಓಪೆಕ್ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಉಸಿರಾಟದ ಸಮಸ್ಯೆ ತೀವ್ರವಾಗಿದ್ದರಿಂದ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ನಿನ್ನೆ(ಶುಕ್ರವಾರ) ರಾತ್ರಿ ಚಿಕಿತ್ಸೆ ಫಲಿಸದೆ ಸಬ್ರಿಜಿಸ್ಟ್ರಾರ್ ಮೃತಪಟ್ಟಿದ್ದಾರೆ.
ಇದನ್ನೂ ಓದಿರಿ ಕರೊನಾ ಸೋಂಕಿತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ?
ಮಗನ ಸಾವಿನ ಸುದ್ದಿ ಕೇಳಿದ ಸಬ್ ರಿಜಿಸ್ಟ್ರಾರ್ ತಾಯಿಗೆ ಆಘಾತವಾಗಿದ್ದು, ಅವರೂ ಅಸುನೀಗಿದ್ದಾರೆ. ಮತ್ತೊಂದೆಡೆ ಮೃತ ಸಬ್ ರಿಜಿಸ್ಟ್ರಾರ್ರ ಅಣ್ಣನಿಗೂ ಕರೊನಾ ಪಾಸಿಟಿವ್ ದೃಢಪಟ್ಟಿದ್ದು, ಹೈದ್ರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ತಾಯಿ ಮತ್ತು ಸಹೋದರ ಮೃತಪಟ್ಟರೂ ಅವರ ಅಂತಿಮ ದರ್ಶನ ಮಾಡುವ ಭಾಗ್ಯ ಸಿಗಲಿಲ್ಲ.
ತಿಥಿ ಕಾರ್ಯ ಮುಗಿದ ನಂತರ ಬಂತು ಶವ, ಕೋವಿಡ್ ಆಸ್ಪತ್ರೆಯ ಮಹಾ ಯಡವಟ್ಟು!