More

    ಎಲ್ಲರ ಮಂಪರು ಪರೀಕ್ಷೆ ನಡೆಯಲಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಕುರಿತು ನಿವೃತ್ತ ಪೊಲೀಸ್ ಕಮಿಷನರ್ ಪ್ರತಿಕ್ರಿಯೆ

    ಬೆಂಗಳೂರು: 545 ಪೊಲೀಸ್ ಸಬ್​ ಇನ್​ಸ್ಪೆಕ್ಟರ್​ ನೇಮಕಾತಿ ಅಕ್ರಮ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದಲ್ಲದೆ, ಆ ಸಂಬಂಧ ದಿನೇದಿನೆ ನಾನಾ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ನಿವೃತ್ತ ಪೊಲೀಸ್ ಆಯುಕ್ತರೊಬ್ಬರು ಪ್ರತಿಕ್ರಿಯೆ ನೀಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಹೌದು.. ಪಿಎಸ್​ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನಿವೃತ್ತ ಪೊಲೀಸ್​ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಈ ರೀತಿ ಆಗುತ್ತಿರುವುದು ಅವಮಾನ. ನಾನು ಅಜಯ್ ಕುಮಾರ್ ಸಿಂಗ್ ಇದ್ದಾಗ ಈ ಒಎಂಆರ್ ಶೀಟ್ ವ್ಯವಸ್ಥೆ ಜಾರಿಗೆ ತಂದಿದ್ದೆವು. ಆದರೆ ಈಗ ಅದನ್ನೂ ಮೀರಿ ಈ ರೀತಿ ಅಕ್ರಮ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಎಲ್ಲರ ಮಂಪರು ಪರೀಕ್ಷೆ ಮಾಡಿಸಬೇಕು ಹಾಗೂ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು. ಇಲ್ಲವಾದರೆ ಪೊಲೀಸ್ ಇಲಾಖೆ ಮೇಲೆ ನಂಬಿಕೆ ಹೊರಟು ಹೋಗುತ್ತದೆ ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಮತ್ತೊಂದೆಡೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 11 ಮಂದಿಗೆ 19ನೇ ಜೆಎಂಎಫ್​ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅಲ್ಲದೆ ಮನು ಕುಮಾರ್ ಎಂಬ ಅಭ್ಯರ್ಥಿ ನಾಲ್ಕು ದಿನಗಳ ಕಾಲ ಸಿಐಡಿ ಕಸ್ಟಡಿಗೆ, ನಿನ್ನೆ ಬಂಧನವಾಗಿದ್ದ ಶಶಿಧರ್ ಹಾಗೂ ಕೇಶವಮೂರ್ತಿ‌ಗೆ 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

    ಒಂದು ಮುತ್ತಿನ ಕಥೆ: ಮದುವೆಯಂತೂ ತ್ವರಿತ, ಅದು ಬಿಂದುವಲ್ಲ ಹರಿತ!; ಖ್ಯಾತ ನಟನ ಸ್ಪಷ್ಟೀಕರಣ..

    ‘ನನ್ನ ಜೀವನದ ಕೊನೆಯ ಆಸೆ ಏನು ಗೊತ್ತಾ?’ ಎನ್ನುತ್ತಲೇ ಮಹತ್ವದ ವಿಚಾರವೊಂದನ್ನು ಹೇಳಿದ್ರು ಮಾಜಿ ಪ್ರಧಾನಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts