More

    ಸುಶಾಂತ್​ ಸಿಂಗ್ ಸಾವಿಗೆ ದುಬೈ ಲಿಂಕ್​; ಸುಬ್ರಹ್ಮಣಿಯನ್​ ಸ್ವಾಮಿ ಹೇಳೋದೇನು?

    ನವದೆಹಲಿ: ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ ಸಾವಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್​​ ಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

    ನಟನ ಸಾವಿನಲ್ಲಿ ದುಬೈನಲ್ಲಿರುವ ಅಕ್ರಮ ಹಣ ಸಾಗಣೆದಾರರು ಹಾಗೂ ವೃತ್ತಿಪರ ಕಿಲ್ಲರ್​ಗಳ ಪಾತ್ರವನ್ನು ತಳ್ಳಿಹಾಕಲಾಗದು ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

    ಇದನ್ನೂ ಓದಿ; ಮಸೀದಿಗಳನ್ನು ಒಡೆದು ಅದೇ ಜಾಗದಲ್ಲಿ ಶೌಚಗೃಹ, ಮದ್ಯದಂಗಡಿ ನಿಮಿರ್ಸಿದ ಚೀನಾ ಸರ್ಕಾರ….! 

    ಸಾವಿನ ತನಿಖೆಯಲ್ಲಿ ಅನೇಕ ಅಪಹಾಸ್ಯಕರ ಸಂಗತಿಗಳು ನಡೆದಿವೆ. ತನಿಖೆ ಸಮಗ್ರವಾಗಿ ನಡೆಯುತ್ತಿಲ್ಲ ಎಂದು ಸುಬ್ರಹ್ಮಣಿಯನ್​ ಸ್ವಾಮಿ ಟೀಕಿಸಿದ್ದಾರೆ. ಪ್ರಕರಣವನ್ನು ಸಿಬಿಐ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್​ ಆದೇಶ ನೀಡಿದ ಬಳಿಕ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

    ಆಗಸ್ಟ್​ 16ರಂದು ಟ್ವಿಟ್​ ಮಾಡಿದದ ಸುಬ್ರಹ್ಮಣಿಯನ್​ ಸ್ವಾಮಿ ಸುಶಾಂತ್​ ಸಾವು ಆತ್ಮಹತ್ಯೆಯಲ್ಲ ಕೊಲೆ ಎಂದಿದ್ದರು. ಜತೆಗೆ, ಪ್ರಕರಣದ ಸಿಬಿಐ ತನಿಖೆಗೆ ಒತ್ತಾಯಿಸಿದ್ದರು.

    ಇದನ್ನೂ ಓದಿ; ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಮಗನನ್ನು 105 ಕಿ.ಮೀ. ದೂರದ ಕೇಂದ್ರಕ್ಕೆ ಸೈಕಲ್​ನಲ್ಲಿ ಕರೆತಂದ ತಂದೆ..! 

    ಗುಪ್ತಚರ ಇಲಾಖೆಯ ಮಾಜಿ ಅಧಿಕಾರಿ ಎನ್​.ಕೆ. ಸೂದ್​ ಕೂಡ ಪ್ರಕರಣದಲ್ಲಿ ಭೂಗತ ಲೋಕದ ನಂಟು ಹೊಂದಿರಬಹುದಾದ ಸಾಧ್ಯತೆ ಬಗ್ಗೆ ಮಾತನಾಡಿದ್ದಾರೆ. ಭೂಗತ ಲೋಕದ ಕ್ರಿಮಿನಲ್​ಗಳು ಅತ್ಯಂತ ವ್ಯವಸ್ಥಿತವಾಗಿ ಅಪರಾಧಿಕ ಕೃತ್ಯವನ್ನು ಮುಗಿಸುತ್ತಾರೆ ಹಾಗೂ ತಮ್ಮ ಮೇಲಿನ ಗಮನವನ್ನು ಬೇರೆಡೆಗೆ ಸೆಳೆಯಲು ಯಶಸ್ವಿಯಾಗುತ್ತಾರೆ ಎಂದು ಹೇಳಿದ್ದಾರೆ.

    ಅನುಕಂಪ ಆಧಾರದ ಸರ್ಕಾರಿ ಕೆಲಸ; ಗಳಿಸಿದ್ದು ಕೆಜಿಗಟ್ಟಲೇ ಚಿನ್ನ, ಬೆಳ್ಳಿ; ಕೋಟ್ಯಂತರ ಮೌಲ್ಯದ ಸ್ವತ್ತು ವಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts