ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಸಾವಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
ನಟನ ಸಾವಿನಲ್ಲಿ ದುಬೈನಲ್ಲಿರುವ ಅಕ್ರಮ ಹಣ ಸಾಗಣೆದಾರರು ಹಾಗೂ ವೃತ್ತಿಪರ ಕಿಲ್ಲರ್ಗಳ ಪಾತ್ರವನ್ನು ತಳ್ಳಿಹಾಕಲಾಗದು ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ; ಮಸೀದಿಗಳನ್ನು ಒಡೆದು ಅದೇ ಜಾಗದಲ್ಲಿ ಶೌಚಗೃಹ, ಮದ್ಯದಂಗಡಿ ನಿಮಿರ್ಸಿದ ಚೀನಾ ಸರ್ಕಾರ….!
ಸಾವಿನ ತನಿಖೆಯಲ್ಲಿ ಅನೇಕ ಅಪಹಾಸ್ಯಕರ ಸಂಗತಿಗಳು ನಡೆದಿವೆ. ತನಿಖೆ ಸಮಗ್ರವಾಗಿ ನಡೆಯುತ್ತಿಲ್ಲ ಎಂದು ಸುಬ್ರಹ್ಮಣಿಯನ್ ಸ್ವಾಮಿ ಟೀಕಿಸಿದ್ದಾರೆ. ಪ್ರಕರಣವನ್ನು ಸಿಬಿಐ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಆಗಸ್ಟ್ 16ರಂದು ಟ್ವಿಟ್ ಮಾಡಿದದ ಸುಬ್ರಹ್ಮಣಿಯನ್ ಸ್ವಾಮಿ ಸುಶಾಂತ್ ಸಾವು ಆತ್ಮಹತ್ಯೆಯಲ್ಲ ಕೊಲೆ ಎಂದಿದ್ದರು. ಜತೆಗೆ, ಪ್ರಕರಣದ ಸಿಬಿಐ ತನಿಖೆಗೆ ಒತ್ತಾಯಿಸಿದ್ದರು.
ಇದನ್ನೂ ಓದಿ; ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಮಗನನ್ನು 105 ಕಿ.ಮೀ. ದೂರದ ಕೇಂದ್ರಕ್ಕೆ ಸೈಕಲ್ನಲ್ಲಿ ಕರೆತಂದ ತಂದೆ..!
ಗುಪ್ತಚರ ಇಲಾಖೆಯ ಮಾಜಿ ಅಧಿಕಾರಿ ಎನ್.ಕೆ. ಸೂದ್ ಕೂಡ ಪ್ರಕರಣದಲ್ಲಿ ಭೂಗತ ಲೋಕದ ನಂಟು ಹೊಂದಿರಬಹುದಾದ ಸಾಧ್ಯತೆ ಬಗ್ಗೆ ಮಾತನಾಡಿದ್ದಾರೆ. ಭೂಗತ ಲೋಕದ ಕ್ರಿಮಿನಲ್ಗಳು ಅತ್ಯಂತ ವ್ಯವಸ್ಥಿತವಾಗಿ ಅಪರಾಧಿಕ ಕೃತ್ಯವನ್ನು ಮುಗಿಸುತ್ತಾರೆ ಹಾಗೂ ತಮ್ಮ ಮೇಲಿನ ಗಮನವನ್ನು ಬೇರೆಡೆಗೆ ಸೆಳೆಯಲು ಯಶಸ್ವಿಯಾಗುತ್ತಾರೆ ಎಂದು ಹೇಳಿದ್ದಾರೆ.
ಅನುಕಂಪ ಆಧಾರದ ಸರ್ಕಾರಿ ಕೆಲಸ; ಗಳಿಸಿದ್ದು ಕೆಜಿಗಟ್ಟಲೇ ಚಿನ್ನ, ಬೆಳ್ಳಿ; ಕೋಟ್ಯಂತರ ಮೌಲ್ಯದ ಸ್ವತ್ತು ವಶ