More

    ಸತತ ಪರಿಶ್ರಮದಿಂದ ಯಶಸ್ಸು ಗಳಿಸಲು ಸಾಧ್ಯ

    ನಾಪೋಕ್ಲು: ಸತತ ಪರಿಶ್ರಮದಿಂದ ಯಶಸ್ಸು ಗಳಿಸಲು ಸಾಧ್ಯ ಎಂದು ಉದ್ಯಮಿ ಕೇಟೋಳಿರ ಕರುಣ್ ಅಪ್ಪಯ್ಯ ಹೇಳಿದರು.

    ಇಲ್ಲಿನ ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಜೀವನದ ಪ್ರತಿಯೊಂದು ಚಟುವಟಿಕೆಯಲ್ಲೂ ನಯ, ವಿನಯತೆಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ನಾವು ಗಳಿಸಿದ ಜ್ಞಾನ ಇತರರ ಜೀವನದ ಮೇಲೆ ಪ್ರಭಾವ ಬೀರುವಂತಾಗಬೇಕು ಎಂದರು.

    ಅಧ್ಯಕ್ಷತೆ ವಹಿಸಿದ್ದ ಎಸ್‌ಎಪಿ ಲ್ಯಾಬ್ ಇಂಡಿಯಾ ಕಂಪನಿ ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರನ್ನು ಸ್ಮರಿಸಿ, ಸಂಸ್ಥೆ ನಡೆದುಬಂದ ದಾರಿಯ ಬಗ್ಗೆ ಪ್ರಸ್ತಾಪಿಸಿದರು.

    ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ದತ್ತಿನಿಧಿ ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಾದವರಿಗೆ ಅತಿಥಿಗಳು ಬಹುಮಾನ ವಿತರಿಸಿ ಶುಭ ಹಾರೈಸಿದರು.

    ನಿರ್ದೇಶಕರಾದ ನಿವೃತ್ತ ಪ್ರಾಂಶುಪಾಲ ಕಲ್ಯಾಟಂಡ ಪೂಣಚ್ಚ, ಬೊಪ್ಪಂಡ ಕುಶಾಲಪ್ಪ , ಮಕ್ಕಿ ಸುಬ್ರಮಣ್ಯ, ಬಿದ್ದಾಟಂಡ ಪಾಪ ಮುದ್ದಯ್ಯ , ಕೊಂಬಂಡ ಗಣೇಶ್, ನೆರವಂಡ ಸುನಿಲ್ ದೇವಯ್ಯ, ಬಿದ್ದಾತಂಡ ಮುತ್ತಣ್ಣ, ನಾಯಕಂಡ ದೀಪು ಚಂಗಪ್ಪ, ಅಪ್ಪಚೆಟ್ಟೋಳಂಡ ನವೀನ್ , ಚೌರಿರ ನೀರನ್ ಮಂದಣ್ಣ, ಶಾಲೆಯ ಪ್ರಾಂಶುಪಾಲರಾದ ಕಲ್ಯಾಟಂಡ ಶಾರದಾ ಅಪ್ಪಣ್ಣ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

    ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಎಸ್‌ಎಪಿ ಲ್ಯಾಬ್ ಇಂಡಿಯಾದ ಕಂಪನಿ ಮಾಲೀಕ ಕೇಟೋಳಿರ ಕರುಣ್ ಅಪ್ಪಯ್ಯ ಮಾತನಾಡಿದರು. ಕಲ್ಯಾಟಂಡ ಪೂಣಚ್ಚ, ಬೊಪ್ಪಂಡ ಕುಶಾಲಪ್ಪ, ಮಕ್ಕಿ ಸುಬ್ರಹ್ಮಣ್ಯ, ಬಿದ್ದಾತಂಡ ಮುತ್ತಣ್ಣ, ನಾಯಕಂಡ ದೀಪು ಚಂಗಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts