More

    ಅಭಿವೃದ್ಧಿ ಮತ್ತೆ ವೇಗ ತರಲಾಗುವುದು

    ವಿಜಯವಾಣಿ ಸುದ್ದಿಜಾಲ ಬೆಂಗಳೂರು
    ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೋದಿ ಗ್ಯಾರಂಟಿಗಳ ಕುರಿತು ಹಾಗೂ ಹಿಂದಿನ ಡಬಲ್ ಇಂಜಿನ್ ಸರ್ಕಾರದ ಕುರಿತು ಕಾರ್ಯಕರ್ತರಿಂದ ಪ್ರಚಾರ ನಡೆಯುತ್ತಿದ್ದು, ಹಿಂದಿನ ಅಭಿವೃದ್ಧಿಯ ವೇಗವನ್ನೇ ಮತ್ತೆ ತರುವುದಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಭರವಸೆ ನೀಡಿದರು.
    ಬೆಂಗಳೂರಿನ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದು ಮಾತನಾಡಿದರು. ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಯಲುಸೀಮೆಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದು, ಅದರ ಪರಿಣಾಮ ಜನಜೀವನದಲ್ಲಿ ಕಂಡುಬಂದಿದೆ. ಆದರೆ ಕಳೆದ 10 ತಿಂಗಳಿಂದ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಮಾತ್ರ ಜನರಿಗೆ ಸಂಪೂರ್ಣವಾಗಿ ದೊರೆಯುತ್ತಿದ್ದು, ಈ ಕುರಿತು ಜನರಿಗೆ ತಿಳಿಸಲಾಗುತ್ತಿದೆ ಎಂದು ಹೇಳಿದರು.
    ದಾಬಸ್‌ಪೇಟೆಯಿಂದ ದೊಡ್ಡಬಳ್ಳಾಪುರ ಮೂಲಕ ಹೊಸಕೋಟೆಗೆ ರೂ. 2755.88 ಕೋಟಿ ರೂ. ವೆಚ್ಚದಲ್ಲಿ ರಿಂಗ್ ರಸ್ತೆ ನಿರ್ಮಾಣವಾಗುತ್ತಿದೆ. ನೈಋತ್ಯ ರೈಲ್ವೆ ವಿಭಾಗದಿಂದ 2021-22 ರಲ್ಲಿ ವಿದ್ಯುದೀಕರಣ ಕೈಗೊಳ್ಳಲಾಗಿದೆ. 459 ಕಿ.ಮೀ. ಗುರಿಗೆ ಬದಲು, 511.7 ಕಿ.ಮೀ. ವಿದ್ಯುದೀಕರಣ ಪೂರ್ಣಗೊಂಡಿದೆ. ಇದರಲ್ಲಿ ಯಲಹಂಕ-ಚಿಕ್ಕಬಳ್ಳಾಪುರದ ನಡುವೆ 45 ಕಿಮೀ. ಮಾರ್ಗವನ್ನು ವಿದ್ಯುದೀಕರಣ ಮಾಡಲಾಗಿದೆ. ನೈಋತ್ಯ ರೈಲ್ವೆಯು ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಮೆಮು ರೈಲು ನೀಡಲು ನಿರ್ಧರಿಸಿದೆ. ಇದರಿಂದ ನಂದಿ ಬೆಟ್ಟಕ್ಕೆ ಕೂಡ ಪ್ರವಾಸಿಗರು ರೈಲಿನಲ್ಲಿ ಹೋಗಬಹುದು ಎಂದು ಸುಧಾಕರ್ ತಿಳಿಸಿದರು.
    ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿ ಕ್ಷೇತ್ರಗಳಲ್ಲಿ ಮತ ಯಾಚಿಸುತ್ತಿದ್ದು, ಈ ವೇಳೆ ಕೇಂದ್ರ ಸರ್ಕಾರ ನೀಡಿದ ಯೋಜನೆಗಳು ಹಾಗೂ ಬಿಜೆಪಿ ಡಬಲ್ ಎಂಜಿನ್ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲಾಗುತ್ತಿದೆ ಎಂದು ಡಾ. ಕೆ. ಸುಧಾಕರ್ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts