More

    ಮೈಸೂರು ಕಾರಾಗೃಹದಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ

    ಮೈಸೂರು: ಕೇಂದ್ರ ಕಾರಾಗೃಹದಲ್ಲಿ ಅನಿರೀಕ್ಷಿತ ತಪಾಸಣಾ ಕಾರ್ಯಾಚರಣೆಯನ್ನು ಪೊಲೀಸರು ನಡೆಸಿದರು.


    ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಅವರು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎಂ.ಮುತ್ತುರಾಜು, ಡಿಸಿಪಿ(ಅಪರಾಧ ಮತ್ತು ಸಂಚಾರ) ಎಸ್.ಜಾಹ್ನವಿ ಹಾಗೂ ಇತರ ಪೊಲೀಸ್ ಅಧಿಕಾರಿಗಳೊಂದಿಗೆ ಕಾರಾಗೃಹದ ಮೇಲೆ ದಿಢೀರ್ ದಾಳಿ ಮಾಡಿ ತಪಾಸಣೆ ಕೈಗೊಂಡರು. ಶ್ವಾನದಳ ಮತ್ತು ಎಎಸ್‌ಸಿ ತಂಡವನ್ನೂ ಬಳಸಿಕೊಳ್ಳಲಾಯಿತು.


    ಈ ಸಂದರ್ಭದಲ್ಲಿ ಕಾರಾಗೃಹದ ಆವರಣದಲ್ಲಿ ಅನಧಿಕೃತವಾಗಿ ಇದ್ದ ಒಂದು ಸಿಮ್ ಕಾರ್ಡ್, ನಗದು, ಬ್ಲೇಡ್ ಹಾಗೂ ಚಾಕುವಿನಂತ ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts