ಬೆಂಗಳೂರು: ಈ ಸಂಕ್ರಾಂತಿಗೆ ‘ಕಬ್ಜ’ ಚಿತ್ರತಂಡದಿಂದ ಒಂದು ಸರ್ಪ್ರೖೆಸ್!
ಹಾಗಂತ ಆ ಚಿತ್ರದ ನಿರ್ಮಾಪಕ ಮತ್ತು ನಿರ್ದೇಶಕ ಆರ್. ಚಂದ್ರು ಎರಡು ದಿನಗಳ ಹಿಂದಷ್ಟೇ ಘೋಷಿಸಿದ್ದರು. ಗುರುವಾರ ಬೆಳಗ್ಗೆ 10 ಗಂಟೆಗೆ ಆ ಸರ್ಪ್ರೖೆಸ್ ಏನು ಎಂದು ತಿಳಿಸುವುದಾಗಿ ಹೇಳಿದ್ದರು. ಆದರೆ, ಎರಡು ದಿನಗಳ ಮುಂಚೆಯೇ ಆ ಸರ್ಪ್ರೖೆಸ್ ಬಯಲಾಗಿದ್ದು, ಚಿತ್ರದಲ್ಲಿ ಸುದೀಪ್ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವುದು ಪಕ್ಕಾ ಆಗಿದೆ.
ಉಪೇಂದ್ರ ಮತ್ತು ಸುದೀಪ್, ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾದ ‘ಮುಕುಂದ ಮುರಾರಿ’ ಚಿತ್ರದಲ್ಲಿ ನಟಿಸಿದ್ದರು. ಇದೀಗ ‘ಕಬ್ಜ’ ಚಿತ್ರದಲ್ಲಿ ಮತ್ತೆ ಜತೆಯಾಗಲಿದ್ದಾರೆ. ಈ ಚಿತ್ರದಲ್ಲಿ ಸುದೀಪ್ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಗುರುವಾರ ಅವರ ಫಸ್ಟ್ ಲುಕ್ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಸುದೀಪ್ ಅವರ ಪಾತ್ರವೇನು ಎಂಬ ವಿಷಯವನ್ನು ರಹಸ್ಯವಾಗಿಟ್ಟಿದ್ದು, ಅದನ್ನು ಚಿತ್ರದಲ್ಲೇ ನೋಡಿ ಎನ್ನುತ್ತಾರೆ ಚಂದ್ರು.
ಅಂಡರ್ವರ್ಲ್ಡ್ ಹಿನ್ನೆಲೆಯ ‘ಕಬ್ಜ’ ಚಿತ್ರದ ಚಿತ್ರೀಕರಣ ಕಳೆದ ವರ್ಷವೇ ಶುರುವಾಗಿತ್ತು. ಆದರೆ, ಲಾಕ್ಡೌನ್ನಿಂದಾಗಿ ಚಿತ್ರೀಕರಣ ನಿಂತಿತ್ತು. ಇದೀಗ ಜನವರಿ ಕೊನೆಯ ವಾರದಿಂದ ಪುನಃ ಪ್ರಾರಂಭವಾಗಲಿದ್ದು, ಬೆಂಗಳೂರಿನ ಮಿನರ್ವ ಮಿಲ್ನಲ್ಲಿ ಚಿತ್ರಕ್ಕಾಗಿಯೇ ವಿಶೇಷ ಸೆಟ್ ನಿರ್ವಿುಸಲಾಗುತ್ತಿದೆ.
ಅಯೋಧ್ಯೆ ರಾಮಮಂದಿರ ನಿಧಿ ಸಮರ್ಪಣೆಗಾಗಿ ಕೋರಿದ ನಟಿ ಪ್ರಣೀತಾ ಸುಭಾಷ್