ಮೂರು ಚಿತ್ರಗಳಿಗೆ ಸುದೀಪ್​ ಗ್ರೀನ್​ ಸಿಗ್ನಲ್​; ಸದ್ಯದಲ್ಲೇ ಘೋಷಣೆ

blank

ಬೆಂಗಳೂರು: ಸುದೀಪ್​ ಅಭಿನಯದ ‘ವಿಕ್ರಾಂತ್​ ರೋಣ’ ಚಿತ್ರವು ಬಿಡುಗಡೆಯಾಗಿ ಎಂಟು ತಿಂಗಳುಗಳಾಗಿವೆ. ಈ ಎಂಟು ತಿಂಗಳುಗಳಲ್ಲಿ ಅವರು ಯಾವೊಂದು ಹೊಸ ಚಿತ್ರವನ್ನೂ ಒಪ್ಪಿಕೊಂಡಿಲ್ಲ. ‘ಬಿಗ್​ ಬಾಸ್​’, ಸಿಸಿಎಲ್​, ಕೆಸಿಸಿ ಎಂದು ಬಿಜಿಯಾಗಿದ್ದ ಸುದೀಪ್​, ಯಾವ ಚಿತ್ರವನ್ನು ಒಪ್ಪುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇತ್ತು. ಈಗ ಆ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ ಬೇರೆಯಾಗಲು ಈ ನಟ ಕಾರಣವಂತೆ!?

ಸುದೀಪ್​ ಈಗ ಒಂದಲ್ಲ, ಎರಡಲ್ಲ, ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರಂತೆ. ಹಾಗಂತ ಅವರೇ ಹೇಳಿಕೊಂಡಿದ್ದಾರೆ. ತಮ್ಮ ಮುಂದಿನ ಹೆಜ್ಜೆಯ ಬಗ್ಗೆ ಇದ್ದ ಹಲವು ಗೊಂದಲಗಳಿಗೆ ಸೋಷಿಯಲ್​ ಮೀಡಿಯಾದಲ್ಲಿ ಪತ್ರ ಬರೆಯುವ ಮೂಲಕ ತೆರೆ ಎಳೆದಿರುವ ಅವರು, ಆ ಪತ್ರದಲ್ಲಿ ಮೂರು ಚಿತ್ರಗಳಿಗೆ ಗ್ರೀನ್​ ಸಿಗ್ನಲ್​ ನೀಡಿರುವುದಾಗಿ ಹೇಳಿಕೊಂಡಿದ್ದಾರೆ.

ಈ ಕುರಿತು ಬರೆದುಕೊಂಡಿರುವ ಅವರು, ”ವಿಕ್ರಾಂತ್​ ರೋಣ’ ನಂತರ ಒಂದು ದೊಡ್ಡ ಬ್ರೇಕ್​ ತೆಗೆದುಕೊಂಡಿದ್ದೆ ಮತ್ತು ಇದು ನನ್ನ ಮೊದಲ ದೊಡ್ಡ ಬ್ರೇಕ್​ ಆಗಿತ್ತು. ಕೋವಿಡ್​ ಸಮಯದಲ್ಲಿ ‘ವಿಕ್ರಾಂತ್​ ರೋಣ’ ಚಿತ್ರದ ಚಿತ್ರೀಕರಣ ಮಾಡುವುದು ಅಷ್ಟು ಸುಲಭವಾಗಿರಲಿಲ್ಲ. ಆ ನಂತರ ಓಟಿಟಿ ಮತ್ತು ಟಿವಿಯಲ್ಲಿ ಪ್ರಸಾರವಾದ ‘ಬಿಗ್​ ಬಾಸ್​’ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದೆ. ಸತತ ಕೆಲಸಗಳಿಂದ ಸುಸ್ತಾಗಿದ್ದರಿಂದ ಒಂದು ಬ್ರೇಕ್​ ಪಡೆಯುವುದಕ್ಕೆ ಯೋಚಿಸಿದೆ. ಕ್ರಿಕೆಟ್​ ನನಗೆ ಅಂಥದ್ದೊಂದು ವಿಶ್ರಾಂತಿ ಮತ್ತು ಖುಷಿ ನೀಡುತ್ತದೆ. ಕೆಸಿಸಿ ಮತ್ತು ಕರ್ನಾಟಕ ಬುಲ್​ಡೋಜರ್ಸ್​ ಜತೆಗೆ ಒಂದಿಷ್ಟು ಸಮಯ ಕಳೆಯುವ ಅವಕಾಶ ಸಿಕ್ಕಿದ್ದು, ಈ ಸಮಯವನ್ನು ಬಹಳ ಎಂಜಾಯ್​ ಮಾಡಿದೆ’ ಎಂದು ಹೇಳಿಕೊಂಡಿದ್ದಾರೆ.

ತಮ್ಮ ಯೋಜನೆಗಳ ಕುರಿತು ಬರೆದುಕೊಂಡಿರುವ ಅವರು, ‘ಈ ಮಧ್ಯೆ, ನನ್ನ ಮುಂದಿನ ಚಿತ್ರಗಳ ಕುರಿತಾದ ಚರ್ಚೆಗಳು ನಡೆಯುತ್ತಲೇ ಇತ್ತು ಮತ್ತು ಒಂದಿಷ್ಟು ಕಥೆಗಳನ್ನು ಕೇಳಿದ್ದೇನೆ. ಈ ಪೈಕಿ ಮೂರು ಕಥೆಗಳನ್ನು ಓಕೆ ಮಾಡಿದ್ದೇನೆ. ಈ ಚಿತ್ರಕ್ಕೆ ಸಾಕಷ್ಟು ಹೋಂವರ್ಕ್​ನ ಅವಶ್ಯಕತೆಗಳಿದ್ದು, ಸಾಕಷ್ಟು ತಯಾರಿಗಳು ನಡೆಯುತ್ತಿವೆ. ಈ ಮೂರೂ ತಂಡಗಳು ಹಗಲು-ರಾತ್ರಿ ಕೆಲಸ ಮಾಡುತ್ತಿದ್ದು, ಸದ್ಯದಲ್ಲೇ ಚಿತ್ರಗಳನ್ನು ಘೋಷಿಸಲಿವೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಟಿ ನಗ್ಮಾ ಜತೆ ವಿವಾಹೇತರ ಸಂಬಂಧ ವದಂತಿ: ಕೊನೆಗೂ ಮೌನ ಮುರಿದ ನಟ ರವಿಕಿಶನ್​

ಸುದೀಪ್​ ಅವರು ಮೂರು ಚಿತ್ರಗಳನ್ನು ಒಪ್ಪಿದ್ದು ಕೇಳಿ ಅವರ ಅಭಿಮಾನಿಗಳು ಸಂತೋಷಗೊಂಡಿದ್ದು, ಆ ಚಿತ್ರಗಳ ಘೋಷಣೆ ಯಾವಾಗ ಎಂದು ಕುತೂಹಲದಿಂದ ಕಾಯುತ್ತಿದ್ದಾರೆ.

ಬೋಲ್ಡ್​ ಆಗಿ ನಟಿಸಿದ ಮಾತ್ರಕ್ಕೆ… ಅಸಭ್ಯ ಪ್ರಶ್ನೆ ಕೇಳಿದ ಯೂಟ್ಯೂಬರ್​ಗೆ ನಟಿ ತನಿಶಾ ಕುಪ್ಪಂಡ ಕ್ಲಾಸ್​

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…