ಬೆಂಗಳೂರು: ನಟ-ನಿರ್ದೇಶಕ ಕಿಚ್ಚ ಸುದೀಪ್ ಮತ್ತು ನಿರ್ಮಾಪಕ ಎಂ.ಎನ್.ಕುಮಾರ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಇದು ಇನ್ನೊಂದು ಹಂತಕ್ಕೆ ತಲುಪಿ ತಾರಕಕ್ಕೆ ಹೋಗುವ ಲಕ್ಷಣಗಳು ಗೋಚರಿಸುತ್ತಿವೆ. ಆ ನಿಟ್ಟಿನಲ್ಲಿ ನಾಳೆ ಪ್ರಮುಖ ಬೆಳವಣಿಗೆಯೊಂದು ಆಗಲಿದೆ.
ಅರ್ಥಾತ್, ತಮ್ಮಿಬ್ಬರ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಎಂ.ಎನ್. ಕುಮಾರ್ ಧರಣೆ ನಡೆಸಲು ಮುಂದಾಗಿದ್ದಾರೆ. ನಾಳೆ ಬೆಳಗ್ಗೆ 11ಕ್ಕೆ ಅವರು ಕರ್ನಾಟಕ ಫಿಲಂ ಚೇಂಬರ್ ಮುಂದೆ ಧರಣಿ ಕೂರಲಿದ್ದಾರೆ. ಕುಮಾರ್ಗೆ ಇನ್ನೂ ಕೆಲವು ನಿರ್ಮಾಪಕರು ಜೊತೆಯಾಗಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಆಂಜನೇಯ ದೇವಳದ ಹುಂಡಿಯಲ್ಲಿ ನೇಪಾಳದ ಕರೆನ್ಸಿ; ‘ಸಾಲ ಮಾಡಿದ್ದೇನೆ, ಪರಿಹಾರ ತೋರು’ ಎಂದು ಚೀಟಿ ಬರೆದು ಕೋರಿದ ಭಕ್ತ
ಸುದೀಪ್ ಹಣ ತೆಗೆದುಕೊಂಡೂ ಸಿನಿಮಾ ಮಾಡಲು ಮುಂದೆ ಬರುತ್ತಿಲ್ಲ ಎಂದು ನಿರ್ಮಾಪಕ ಎಂ.ಎನ್.ಕುಮಾರ್ ಆರೋಪ ಮಾಡುವ ಮೂಲಕ ವಿವಾದ ಭುಗಿಲೆದ್ದಿತ್ತು. ಬಳಿಕ ಈ ಸಂಬಂಧ ಕುಮಾರ್ಗೆ ಸುದೀಪ್ ಲೀಗಲ್ ನೋಟಿಸ್ ಜಾರಿ ಮಾಡಿದ್ದರು. ನಂತರ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ಸುದೀಪ್ ಈ ಪ್ರಕರಣವನ್ನು ನ್ಯಾಯಾಲಯದಲ್ಲೇ ಬಗೆಹರಿಸಿಕೊಳ್ಳಲು ಬಿಡಿ ಎಂದು ಫಿಲಂ ಚೇಂಬರ್ ಮತ್ತು ನಿರ್ಮಾಪಕರ ಸಂಘದವರಿಗೆ ತಿಳಿಸಿದ್ದರು. ಈ ಎಲ್ಲದರ ನಡುವೆ ಕುಮಾರ್ ಧರಣಿ ನಡೆಸಲು ಮುಂದಾಗಿರುವುದು ಪ್ರಕರಣ ತಾರಕಕ್ಕೇರುವ ಸಾಧ್ಯತೆಗಳನ್ನು ತೋರಿಸುತ್ತಿದೆ.
ಎದೆಹಾಲಿನಿಂದಲೇ ಗಿನ್ನೆಸ್ ದಾಖಲೆ ಮಾಡಿದ ಮಹಾತಾಯಿ!; ಇಷ್ಟೊಂದು ಎದೆಹಾಲು ಇದುವರೆಗೆ ಯಾರೂ ಕೊಟ್ಟಿಲ್ಲ!
ತಂದೆ-ತಾಯಿಯಿಂದ ದೂರ ಮಾಡಿದ್ದಕ್ಕೆ ಪತ್ನಿಯನ್ನೇ ಕೊಲೆ ಮಾಡಿಸಲು ಮುಂದಾದ ಪತಿ: ಆರು ತಿಂಗಳ ಬಳಿಕ ಆಗಿದ್ದೇನು?