ಮಂಗಳೂರು : ಹಿಂದೂ ದೇವರುಗಳಿಗೆ ಹಲವಾರು ಭಾರಿ ಅವಮಾನ ಮಾಡಿದ ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿಯರ
ನಡೆಯನ್ನು ವಿರೋಧಿಸಿದ ಬಿಜೆಪಿ ಶಾಸಕರ ಮೇಲೆಯೇ ಕಾಂಗ್ರೆಸ್ ಸರ್ಕಾರ ಕೇಸ್ ದಾಖಲಿಸಿರುವುದು ಖಂಡನೀಯ ಎಂದು ಬಿಜೆಪಿಯ
ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಹೇಳಿದ್ದಾರೆ.
ಕಾಂಗ್ರೆಸ್ನ ಹಿಂದೂ ವಿರೋಧಿ ಹಾಗೂ ಓಲೈಕೆ ರಾಜಕಾರಣ ಮಿತಿ ಮೀರಿದೆ. ಜಿಲ್ಲೆಯ ಪೋಲಿಸ್ ಇಲಾಖೆ ಕೂಡ ಜವಾಬ್ದಾರಿ ಮರೆತು ಕೆಲವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡದ ಡಾ.ವೈ .ಭರತ್ ಶೆಟ್ಟಿ
ಹಾಗೂ ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ಮೇಲೆ ಸುಳ್ಳು ಕೇಸು ದಾಖಲು ಹಾಗೂ ಮುಗ್ಧ ವಿದ್ಯಾರ್ಥಿಗಳ ಪರ ನಿಂತ ವೇದವ್ಯಾಸ್ ಮೇಲೆ ವಿನಾ ಕಾರಣ ಕೇಸು ದಾಖಲಿಸಿದ ಪೋಲಿಸ್ ಇಲಾಖೆ ತಲೆ ತಗ್ಗಿಸುವ ಕೆಲಸ ಮಾಡಿದೆ. ಶಾಸಕರ ವಿರುದ್ದದ ಮೊಕದ್ದಮೆ ಹಿಂಪಡೆದು, ತಪ್ಪು ಮಾಡಿದ ಶಾಲೆಯ ವಿರುದ್ಧ ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
…………………………………