ವಾಯುಯಾನದ ಸುರಕ್ಷತೆಗೆ ಇನ್ನಷ್ಟು ಕಾಳಜಿ ಅಗತ್ಯ…

Sugunendra
blank

ಸುಗುಣೇಂದ್ರ ಶ್ರೀ ಸಲಹೆ

ವಿಜಯವಾಣಿ ಸುದ್ದಿಜಾಲ ಉಡುಪಿ
ಅಹಮ್ಮದಾಬಾದ್​ನಲ್ಲಿ ನಡೆದ ವಿಮಾನ ದುರಂತದ ಸುದ್ದಿ ಕೇಳಿ ಮನಸ್ಸಿಗೆ ತುಂಬ ಆಘಾತವಾಗಿದೆ. ಅಪಘಾತದಲ್ಲಿ ಮೃತಪಟ್ಟ ಎಲ್ಲರಿಗೆ ಸದ್ಗತಿ ಸಿಗಲಿ. ವಾಯುಯಾನದ ಸುರಕ್ಷತೆಯ ಬಗ್ಗೆ ಸಂಸ್ಥೆಗಳು ಇನ್ನಷ್ಟು ಕಾಳಜಿ ವಹಿಸಬೇಕು. ಇಲ್ಲದಿದ್ದಲ್ಲಿ ಜನರಿಗೆ ಭದ್ರತೆಯ ಬಗ್ಗೆ ಸಂಶಯ ಉಂಟಾದರೆ ಮುಂದೆ ತುಂಬ ತೊಡಕು ಉಂಟಾಗಬಹುದು ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರು ಸಲಹೆ ನೀಡಿದ್ದಾರೆ.

ಪ್ರಯಾಣಿಕರ ಭದ್ರತೆ ಮತ್ತು ಸುರಕ್ಷತೆಗೆ ವಿಮಾನಯಾನ ಸಂಸ್ಥೆಗಳು ಪ್ರಥಮ ಪ್ರಾಶಸ್ತ್ಯ ನೀಡಬೇಕು. ತನ್ಮೂಲಕ ಮತ್ತೆ ಇಂತಹ ದುರ್ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೂ ಸಹ ದು:ಖ ಸಹಿಸುವ ಶಕ್ತಿ ಲಭಿಸಲಿ ಎಂದು ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ ಎಂದು ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

ಹೃದಯಾಘಾತ ಯಾವಾಗ ಬೇಕಾದ್ರೂ ಆಗಬಹುದು…ಈ ಒಂದು ಟ್ಯಾಬ್ಲೆಟ್ ಸದಾ ನಿಮ್ಮ ಬಳಿಯಿರಲಿ..! Heart Attack

Heart Attack : ಮೊದಲೆಲ್ಲ ಹೃದಯಾಘಾತವು ವಯಸ್ಕರಲ್ಲಿ ಮಾತ್ರ ಕಂಡುಬರುತ್ತಿತ್ತು. ಆದರೆ, ಇಂದಿನ ಆಧುನಿಕ ಜೀವನದಲ್ಲಿ…

ವಿದುರ ನೀತಿ: ಇಂತಹ ಜನರಿಂದ ದೂರ ಇರಿ.. ಇಲ್ಲವಾದ್ರೆ ಅಪಾಯಕ್ಕೆ ಸಿಲುಕುತ್ತೀರಿ! | Vidura Niti

Vidura Niti: ಮಹಾಭಾರತದಲ್ಲಿ ಪ್ರಮುಖರಲ್ಲಿ ವಿದುರ ಕೂಡ ಒಬ್ಬರು. ಬರೀ ಕೌರವ ಮತ್ತು ಪಾಂಡವರಿಗೆ ಮಾತ್ರ…