More

    ಸೂಕ್ತ ಅಭ್ಯರ್ಥಿ ಆರಿಸಿ ತರಲಿ

    ಅಥಣಿ: ಮತದಾರರು ಮತದಾನದ ಮೂಲಕ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಮತದಾನದಿಂದ ಹೊರಗುಳಿಯಬಾರದು ಎಂದು ಜಿಪಂ ಯೋಜನಾ ನಿರ್ದೇಶಕ ಡಾ.ಎಂ.ಕೃಷ್ಣಾರಾಜ ಹೇಳಿದರು.

    ಇಲ್ಲಿಯ ತಾಲೂಕು ಪಂಚಾಯಿತಿಯಲ್ಲಿ ಸ್ವೀಪ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಚುನಾವಣೆಯಲ್ಲಿ ಒಂದೊಂದು ಮತವೂ ಅತ್ಯಮೂಲ್ಯವಾಗಿದೆ. ಮತದಾನದ ಮಹತ್ವ ಕುರಿತು ಎಲ್ಲರಿಗೂ ಅರಿವು ಮೂಡಿಸಬೇಕು ಎಂದು ತಿಳಿಸಿದರು.

    ಮತದಾನ ಜಾಗೃತಿ ಅಭಿಯಾನ ಸೆಲ್ಪಿ ಸ್ಟಾೃಂಡ್, ಸಹಿ ಅಭಿಯಾನ ಮತ್ತು ಮತದಾರರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಶಿವಾನಂದ ಕಲ್ಲಾಪುರ, ಗ್ರೇಡ್-2 ತಹಸೀಲ್ದಾರ್ ಬಿ.ವೈ.ಹೊಸಕೇರಿ, ಜಿ.ಎಸ್.ಮಠದ, ಎಸ್.ಎಂ.ಸ್ವಾಮಿ, ಪಿಡಿಒಗಳು, ತಾಪಂ ಸಿಬ್ಬಂದಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts