ನವದೆಹಲಿ: ಶಿರೋಮಣಿ ಅಕಾಲಿ ದಳ್ದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಅವರು ಆಗಸ್ಟ್ 11ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ನಿವಾಸದ ಹೊರಗೆ ಧರಣಿ ನಡೆಸಲು ನಿರ್ಧರಿಸಿದ್ದಾರೆ.
ಪಂಜಾಬ್ನಲ್ಲಿ ನಡೆಯುತ್ತಿರುವ ಕಳ್ಳಭಟ್ಟಿ ದುರಂತಕ್ಕೆ ಕಾಂಗ್ರೆಸ್ ಕಾರಣ. ಅಲ್ಲಿನ ಮದ್ಯದ ದಂಧೆಯಲ್ಲಿ ಪಕ್ಷದ ಕೈವಾಡವಿದೆ ಎಂದು ನೇರವಾಗಿ ಆರೋಪ ಮಾಡಿರುವ ಅವರು, ಅಮರಿಂದರ್ ಸಿಂಗ್ ರಾಜೀನಾಮೆಗೆ ನಾವು ಧರಣಿ ಮೂಲಕ ಆಗ್ರಹ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೇವೇಗೌಡರೇ, ನೀವು ಕ್ಷಮೆ ಕೇಳುವುದು ನಮಗೆ ಮುಜುಗರ… ಎಂದ ಜೆಡಿಎಸ್ ಕಾರ್ಯಕರ್ತ
ಕಳ್ಳಭಟ್ಟಿಯಿಂದಾಗಿ ಈಗಾಗಲೇ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇಷ್ಟಾದರೂ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯವೂ ನಡೆಯುತ್ತಿಲ್ಲ. ಹಾಗಾಗಿ ಮುಖ್ಯಮಂತ್ರಿಯ ರಾಜೀನಾಮೆ ಪಡೆಯಲು ಕಾಂಗ್ರೆಸ್ ಹೈಕಮಾಂಡ್ನ್ನು ಆಗ್ರಹ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಹಾಗೇ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಈಗಾಗಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಕಳ್ಳಭಟ್ಟಿ ದಂಧೆಯ ಆರೋಪಿಗಳು ಪಾರಾಗಲು ಬಿಡುವುದಿಲ್ಲ. ಅವರಿಗೆ ತಕ್ಕ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದ್ದಾರೆ. (ಏಜೆನ್ಸೀಸ್)
‘ಭಾಭ್ ಜಿ’ಹಪ್ಪಳ ಕರೊನಾ ವಿರುದ್ಧ ಹೋರಾಡುತ್ತದೆ ಎಂದಿದ್ದ ಕೇಂದ್ರ ಸಚಿವರಿಗೂ ಸೋಂಕು; ಏಮ್ಸ್ಗೆ ದಾಖಲು