ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ನ 13 ನಾಯಕರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಡಿ.ಕೆ.ಶಿವಕುಮಾರ್ಗೆ ಐಟಿ ಕಚೇರಿಯಿಂದ ಪದೇಪದೆ ನೋಟಿಸ್ ಜಾರಿ ಮಾಡಲಾಗುತ್ತಿದೆ. ಇದರ ಹಿಂದೆ ಬಿಜೆಪಿ ಇದೆ. ಉದ್ದೇಶಪೂರ್ವಕವಾಗಿಯೇ ನೋಟಿಸ್ ಜಾರಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಲ ದಿನಗಳ ಹಿಂದೆ ಐಟಿ ಕಚೇರಿ ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು.
ಕರೊನಾ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ಮಾಡಿದ್ದಾರೆ ಎಂದು ಪೊಲೀಸರು ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮಂಗಳವಾರ(ಜ.10) ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಡಾ.ಜಿ ಪರಮೇಶ್ವರ್, ರಿಜ್ವಾನ್ ಅರ್ಷದ್, ಟಿ.ಬಿ. ಜಯಚಂದ್ರ, ವೀರಪ್ಪ ಮೊಯ್ಲಿ, ಕೆ.ಜೆ. ಜಾರ್ಜ್, ಯು.ಟಿ. ಖಾದರ್, ಎಂ.ನಾರಾಯಣಸ್ವಾಮಿ, ಪರಮೇಶ್ವರ್ ನಾಯ್ಕ್, ಸಲೀಂ ಅಹಮದ್, ಸೌಮ್ಯರೆಡ್ಡಿ, ಮಹ್ಮದ್ ಹ್ಯಾರಿಸ್ ನಲಪಾಡ್ಗೆ ಸಮನ್ಸ್ ಜಾರಿ ಆಗಿದೆ.
ಮಂಗಳೂರಿಗೆ ಆಗಮಿಸಿದ ಎಂ.ಎಸ್.ಧೋನಿ: ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು