More

    ಚುನಾವಣೆ ವೇಳೆ ಎಲ್ಲರೂ ಮತದಾನ ಮಾಡಬೇಕು; ಎಂ.ಡಿ. ಹೊನ್ನಮ್ಮನವರ

    ರಾಣೆಬೆನ್ನೂರ: ಚುನಾವಣೆ ಸಮಯದಲ್ಲಿ ಪ್ರತಿಯೊಬ್ಬರೂ ನಮಗೆ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ಪ್ರಾಧ್ಯಾಪಕ ಎಂ.ಡಿ. ಹೊನ್ನಮ್ಮನವರ ಹೇಳಿದರು.
    ಸುಣಕಲ್ಲಬಿದರಿ ಗ್ರಾಮದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಸದ್ಗುರು ಶಿವಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜ್‌ನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಇತ್ತೀಚೆಗೆ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಆರೋಗ್ಯಕರ ಪ್ರಜಾಪ್ರಭುತ್ವಕ್ಕಾಗಿ ಯೋಗ್ಯರನ್ನು ಆಯ್ಕೆ ಮಾಡಬೇಕು. ದೇಶದ ಉತ್ತಮ ಭವಿಷ್ಯಕ್ಕಾಗಿ ಪ್ರಜಾಪ್ರಭುತ್ವ ರಕ್ಷಣೆ, ಸುಭದ್ರ ಹಾಗೂ ಅಭಿವೃದ್ಧಿ ಪರ ಸರ್ಕಾರ ರಚನೆಗೆ ಮುಂದಾಗಬೇಕು ಎಂದರು.
    ಪ್ರಾಚಾರ್ಯ ಪಿ. ಮುನಿಯಪ್ಪ ಅಧ್ಯಕ್ಷತೆ ವಹಿಸಿದ್ದರು.
    ಎನ್‌ಎಸ್‌ಎಸ್ ಯೋಜನಾಧಿಕಾರಿ ಎಚ್. ಶಿವಾನಂದ, ಮಹೇಶ ಟಿ., ಅಶೋಕ ಲಮಾಣಿ, ಸಂತೋಷ ಅಂಗಡಿ, ರೇಣುಕಾ ಗಳಗನಾಥ, ಪೂರ್ಣಿಮಾ ಮಾಗನೂರು, ಎಸ್.ಎಂ. ಮಕಾಂದರ, ಆರ್. ಪ್ರವೀಣಕುಮಾರ, ಜಗದೀಶ ಕೊರಗರ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts