ಸುಂದರೇಶ್ ಅಡ್ಡಗದ್ದೆ ಗ್ರಾಪಂ ಅಧ್ಯಕ್ಷ

blank

ಶೃಂಗೇರಿ: ಅಡ್ಡಗದ್ದೆ ಗ್ರಾಪಂನ ನೂತನ ಅಧ್ಯಕ್ಷರಾಗಿ ಹೆಬ್ಬಿಗೆ ಸುಂದರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ವೇಣುಗೋಪಾಲ್ ಮಾತನಾಡಿ, ಗ್ರಾಪಂಗಳಲ್ಲಿ ಅನುದಾನದ ಕೊರತೆ ಇದ್ದರೂ ಕೂಡಾ ನಿರ್ಗಮಿತ ಅಧ್ಯಕ್ಷ ಹಂಚಲಿ ರಾಘವೇಂದ್ರ ಅವರು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವ ಸೇವಾಕಾರ್ಯ ನಿರ್ವಹಿಸಿದ್ದಾರೆ. ಸೈನಿಕರಿಗೆ ಗೌರವ ಸಮರ್ಪಣೆ, ವಿದ್ಯಾರ್ಥಿಗಳಿಗೆ ಕೃಷಿ ಅರಿವು, ಭತ್ತ ಬೆಳೆಯುವ ರೈತರಿಗೆ ಪ್ರೋತ್ಸಾಹ ಧನ ನೀಡುವ ಮೂಲಕ ಜನಮಾನಸದಲ್ಲಿ ಶಾಶ್ವತ ಸ್ಥಾನ ಗಳಿಸಿದ್ದಾರೆ. ಸರ್ಕಾರದ ಸೌಲಭ್ಯಗಳ ಕುರಿತು ಗ್ರಾಪಂ ವ್ಯಾಪ್ತಿಯಲ್ಲಿ ಮನೆ-ಮನೆಗೆ ತಲುಪಿಸುವ ಗುರುತರ ಜವಾಬ್ದಾರಿ ನೂತನ ಅಧ್ಯಕ್ಷರ ಮೇಲಿದೆ ಎಂದರು.
ನೂತನ ಅಧ್ಯಕ್ಷ ಹೆಬ್ಬಿಗೆ ಸುಂದರೇಶ್ ಮಾತನಾಡಿ, ಮಾಜಿ ಅಧ್ಯಕ್ಷರ ಪರಿಕಲ್ಪನೆಯ ಯೋಜನೆಗಳನ್ನು ಮುಂದುವರಿಸಿ ಗ್ರಾಮದ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದರು.
ಮಂಡಲದ ಪ್ರಧಾನ ಕಾರ್ಯದರ್ಶಿ ನೂತನ್‌ಕುಮಾರ್, ಎಸ್ಸಿ ಮೋರ್ಚಾ ವಕ್ತಾರ ಬಿ.ಶಿವಶಂಕರ್,ಡಿಸಿಸಿ ಬ್ಯಾಂಕ್ ನಿರ್ದೇಶಕ ಗೇರುಬೈಲು ಶಂಕರಪ್ಪ, ಗ್ರಾಪಂ ಉಪಾಧ್ಯಕ್ಷೆ ವಿನೋದ, ಅಡ್ಡಗದ್ದೆ ಶಕ್ತಿ ಕೇಂದ್ರದ ಅಧ್ಯಕ್ಷ ಕೆ.ಡಿ.ಸುರೇಶ್ ಉಪಸ್ಥಿತರಿದ್ದರು.

Share This Article

ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips

Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…

ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd

bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…

ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips

Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…