ಹೊಸಪೇಟೆ: ಸರ್ಕಾರ ಭಾನುವಾರದ ಲಾಕ್ಡೌನ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಕಮಲಾಪುರ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನ ಆ.2 ರಿಂದ ಹುಲಿ ಸಫಾರಿ, ಮೃಗಾಲಯ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಕರೊನಾ ಹರಡುವಿಕೆ ತಡೆಗಾಗಿ ಭಾನುವಾರವೂ ಲಾಕ್ಡೌನ್ ಘೋಷಿಸಿದ್ದರಿಂದ ಪ್ರವೇಶ ನಿಷೇಧಿಸಲಾಗಿತ್ತು. ಈಗ ಸಂಡೇ ಲಾಕ್ಡೌನ್ ತೆರವುಗೊಳಿಸಿದ್ದರಿಂದ ಮಂಗಳವಾರ ರಜಾ ದಿನ ಹೊರತುಪಡಿಸಿ ಉಳಿದೆಲ್ಲ ದಿನಗಳಲ್ಲಿ ಉದ್ಯಾನ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ ಎಂದು ಉದ್ಯಾನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎನ.ಕಿರಣ್ ತಿಳಿಸಿದ್ದಾರೆ.