ವಿಶಾಖಪಟ್ಟಣಂ: ಇಲ್ಲಿನ ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಒಂದಿಲ್ಲೊಂದು ಕಾರಣಕ್ಕೆ ಕ್ರೀಡಾಭಿಮಾನಿಗಳ ಗಮನ ಸೆಳೆಯುತ್ತಿದ್ದು, ಇದೀಗ ಮತ್ತೊಂದು ವಿಚಾರಕ್ಕೆ ವೀಕ್ಷಕರ ಗಮನ ಸೆಳೆಯುತ್ತಿದೆ. ಯಶಸ್ವಿ ಜೈಸ್ವಾಲ್ (209) ದ್ವಿಶತಕದ ನೆರವಿನೊಂದಿಗೆ ಟೀಂ ಇಂಡಿಯಾ ಬೃಹತ್ ಗುರಿ ಪೇರಿಸುವತ್ತ ಸಾಗಿದೆ.
ಟೀಂ ಇಂಡಿಯಾದ ಇನ್ನಿಂಗ್ಸ್ ನಡುವೆ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಗಾರ ಸುನೀಲ್ ಗಾವಸ್ಕರ್ ಪಂದ್ಯದ ನಡುವೆಯೇ ಹೊರ ನಡೆದಿದ್ದಾರೆ ಎಂದು ತಿಳಿದು ಬಂದಿದೆ. ಮೊದಲಿಗೆ ನಿಕಟ ಕಾರಣ ತಿಳಿದು ಬಂದಿರಲಿಲ್ಲ. ಆದರೆ, ಆ ನಂತರ ಕಾರಣವನ್ನು ತಿಳಿಸಲಾಗಿದೆ.
ಇದನ್ನೂ ಓದಿ: ಆರ್ಸಿಬಿ-ಸಿಎಸ್ಕೆ ಪಂದ್ಯದ ಕುರಿತು ಪೋಸ್ಟ್; ತಮಿಳು ಜನರ ಕ್ಷಮೆಯಾಚಿಸಿದ ಕನ್ನಡತಿ
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸುನೀಲ್ ಗಾವಸ್ಕರ್ ಅವರ ಅತ್ತೆ ನಿಧನರಾದ ಕಾರಣ ಅವರು ಪಂದ್ಯದ ಮದ್ಯದಿಂದ ಹೊರನಡೆದಿದ್ದಾರೆ ಎಂದು ತಿಳಿದು ಬಂದಿದೆ. ಕಾನ್ಪುರಕ್ಕೆ ತೆರಳಬೇಕಾಗಿರುವ ಕಾರಣ ಅವರ ವಿಶಾಖಪಟ್ಟಣಂನಿಂದ ತುರ್ತಾಗಿ ತೆರಳಿದ್ದಾರೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯಶಸ್ವಿ ಜೈಸ್ವಾಲ್ ದ್ವಿಶತಕದ ಬಲದೊಂದಿಗೆ ಎರಡನೇ ದಿನದಾಟವನ್ನು ಆರಂಭಿಸಿದ ಟೀಂ ಇಂಡಿಯಾ 112 ಓವರ್ಗಳಲ್ಲಿ 396 ರನ್ ಗಳಿಸಿ ಆಲೌಟ್ ಆಗಿದೆ. ಪ್ರವಾಸಿ ತಂಡದ ಬ್ಯಾಟಿಂಗ್ ಕ್ರಮಾಂಕದ ಮೇಲೆ ಅತಿಥೇಯರು ಹೇಗೆ ಕಡಿವಾಣ ಹೇರಲಿಕದ್ದಾರೆ ಎಂದು ಕಾದು ನೋಢಬೇಕಿದೆ.