ರಾಜಕಾರಣಿಗಳ ಪರ ಹೇಳಿಕೆಗೆ ಸಲ್ಲ

ದೇವರಮನಿ ಶಿವಚರಣ

ಕೊಟ್ಟೂರು: ಹರಿಹರ ಮತ್ತು ಕೂಡಲ ಸಂಗಮ ಪಂಚಮಸಾಲಿ ಪೀಠದ ಉಭಯ ಜಗದ್ಗುರುಗಳು ರಾಜಕಾರಣದಿಂದ ದೂರವಿರಬೇಕು ಎಂದು ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಉಪಾಧ್ಯಕ್ಷ ದೇವರಮನಿ ಶಿವಚರಣ ಹೇಳಿದರು.

blank

ಇದನ್ನೂ ಓದಿ:ಪಂಚಮಸಾಲಿಗರ ಮೇಲೆ ಲಾಠಿಚಾರ್ಜ್; ಶ್ರೀಶೈಲ ಜಗದ್ಗುರುಗಳ ಖಂಡನೆ

ಪಟ್ಟಣದಲ್ಲಿ ಪತ್ರಿಕೆಯೊಂದಿಗೆ ಶನಿವಾರ ಮಾತನಾಡಿ, ಪಂಚಮಸಾಲಿ ಜಗದ್ಗುರುಗಳು ಸಮಾಜವನ್ನು ಒಗ್ಗೂಡಿಸುವ ಜತೆಗೆ ಏಳಿಗೆಗೆ ಶ್ರಮಿಸಲಿ. ರಾಜಕಾರಣಿಗಳನ್ನು ಬೆಂಬಲಿಸಿ ಹೇಳಿಕೆ ನೀಡುವುದು ಸಮಂಜಸವಲ್ಲ. ಈಗಿನ ಎರಡೂ ಪೀಠ ಸೇರಿ, ಐದು ಪಂಚಮಸಾಲಿ ಪೀಠಗಳನ್ನು ಸ್ಥಾಪಿಸುವುದಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಪಂಚಮಸಾಲಿ ಟ್ರಸ್ಟಿ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿಕೆ ಸೂಕ್ತವಲ್ಲ. ಒಂದು ಪೀಠದಡಿ ಉಳಿದ ಮಠಗಳು ಶಾಖಾ ಮಠಗಳಾಗಿರಬೇಕು. ಇಲ್ಲದಿದ್ದರೆ ಸ್ವಾಮೀಜಿಗಳ ನಡುವೆ ಸಮಸ್ಯೆ ಉಂಟಾಗಲಿದೆ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು. ಸ್ವಾಮೀಜಿಗಳು ರಾಜಕಾರಣಿಗಳ ಪರ ಹೇಳಿಕೆಗೆ ಪ್ರತಿ ಹೇಳಿಕೆ ನೀಡಿದರೆ ಒಂದೊಂದು ಗುಂಪಿಗೆ ಒಬ್ಬರು ಸ್ವಾಮೀಜಿ ಎಂಬ ಅಭಿಪ್ರಾಯ ಜನರಲ್ಲಿ ಮೂಡುತ್ತದೆ. ಸಮಾಜವನ್ನು ಗೊಂದಲಕ್ಕೆ ಈಡುಮಾಡುತ್ತದೆ. ಅಭಿವೃದ್ಧಿಗೆ ಹಿನ್ನೆಡೆಯಾಗಿ ಸಂಘಟನೆ ಹಿಮ್ಮುಖವಾಗಲಿದೆ ಎಂದರು.

Share This Article

ಖಾಲಿ ಹೊಟ್ಟೆಯಲ್ಲಿ ಒಂದು ಚಿಟಿಕೆ ಶುಂಠಿ ತಿಂದು, ಈ ಎಲ್ಲಾ ಸಮಸ್ಯೆಗಳಿಗೆ ಗುಡ್​​ ಬಾಯ್​​ ಹೇಳಿ | Ginger

Ginger: ಅಡುಗೆಯ ರುಚಿ ಹೆಚ್ಚಿಸಲು ನಾವು ವಿವಿಧ ರೀತಿಯ ಮಸಾಲೆ ಪದಾರ್ಥಗಳನ್ನು ಬಳಸುತ್ತೇವೆ, ಅವುಗಳಲ್ಲಿ ಶುಂಠಿಯೂ…

ಸಣ್ಣ ಇರುವವರು ದಪ್ಪವಾಗಲು ಇಲ್ಲಿದೆ ಸುಲಭ ಮಾರ್ಗ: ಇಂತಹ ನ್ಯಾಚುರಲ್​​ ಆಹಾರ ಸೇವಿಸಿದ್ರೆ ಸಾಕು| Weight Gain

Weight Gain: ಸಾಮಾನ್ಯವಾಗಿ ದಪ್ಪಗಿರುವ ವ್ಯಕ್ತಿಗಳು ಸಣ್ಣದಾಗಲು ಕಷ್ಟ ಎಂದು ಬಹುತೇಕರು ಪರಿಗಣಿಸುತ್ತಾರೆ. ಆದರೆ, ಸಣಕಲು…

ನಾಗರಹಾವು ಕಚ್ಚಿದ್ರೆ ತಕ್ಷಣ ಈ ರೀತಿ ಮಾಡಿ… ಇಲ್ಲವಾದಲ್ಲಿ ಮೂರೇ ನಿಮಿಷಕ್ಕೆ ಪ್ರಾಣ ಹೋಗುತ್ತೆ! Cobra Snake

Cobra Snake : ಹಾವುಗಳನ್ನು ಕಂಡರೆ ಹೆದರಿ ಓಡುವವರೇ ಹೆಚ್ಚು. ತುಂಬಾ ಅಪಾಯಕಾರಿ ಜೀವಿಗಳಲ್ಲಿ ಹಾವುಗಳು…