ನವದೆಹಲಿ: ಟೀಕಿಸುವ ಮತ್ತು ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುವ ಎಷ್ಟು ಜನರನ್ನು ಜೈಲಿಗೆ ಹಾಕಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತಮಿಳುನಾಡು ಸರ್ಕಾರವನ್ನು ಪ್ರಶ್ನಿಸಿದೆ.
ಇದನ್ನೂ ಓದಿ: ತಾಜ್ ಮಹಲ್ ಬಳಿ ರೀಲ್ಸ್.. ಯುವತಿಗೆ ಎದುರಾಯ್ತು ಆಘಾತ..!
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿರುದ್ಧ ಯೂಟ್ಯೂಬರ್ ಒಬ್ಬರು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಲಯ ತಮಿಳುನಾಡು ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದೆ.
ಯೂಟ್ಯೂಬರ್ನ ಜಾಮೀನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ದದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.
ಯೂಟ್ಯೂಬರ್ ಎ. ದುರೈಮುರುಗನ್ ಜಾಮೀನನ್ನು ಮರುಸ್ಥಾಪಿಸಿದ ನ್ಯಾಯಾಲಯ, ಸಾಮಾಜಿಕ ಮಾಧ್ಯಮದಲ್ಲಿ ಆರೋಪ ಮಾಡುವ ಪ್ರತಿಯೊಬ್ಬರನ್ನು ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ.
ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ದುರೈಮುರುಗನ್ ತಮ್ಮ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ
ತಮಿಳುನಾಡು ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋತಗಿ ಅವರನ್ನು ನ್ಯಾಯಮೂರ್ತಿ ಓಕಾ ಪ್ರಶ್ನಿಸಿದರು, “ನಾವು ಯೂಟ್ಯೂಬ್ನಲ್ಲಿ ಆರೋಪ ಮಾಡುವವರನ್ನು ಜೈಲಿಗೆ ಹಾಕಲು ಪ್ರಾರಂಭಿಸಿದರೆ, ಎಷ್ಟು ಜನರನ್ನು ಜೈಲಿಗೆ ಹಾಕಲಾಗುತ್ತದೆ?” ಮಾನಹಾನಿಕರ ಹೇಳಿಕೆಗಳನ್ನು ನೀಡಬಾರದು ಎಂಬ ಷರತ್ತುಗಳನ್ನು ದುರೈ ಮುರುಗನ್ ಅವರಿಗೆ ಕಡ್ಡಾಯಗೊಳಿಸಬೇಕು ಎಂಬ ಬೇಡಿಕೆಯನ್ನೂ ನ್ಯಾಯಾಲಯ ಪರಿಗಣಿಸಲಿಲ್ಲ.
ಭಾರತದಿಂದ ಅಗತ್ಯ ವಸ್ತುಗಳ ರಫ್ತು ನಂತರ ತೀವ್ರ ಟೀಕಾಪ್ರಹಾರಕ್ಕೆ ಗುರಿಯಾದ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು!