ನವದೆಹಲಿ: ರಾಷ್ಟ್ರಪತಿಗಳು ದಯಾ ಅರ್ಜಿ ವಜಾಗೊಳಿಸಿದ್ದನ್ನು ಪ್ರಶ್ನಿಸಿ ತುರ್ತು ವಿಚಾರಣೆ ನಡೆಸುವಂತೆ ಕೋರಿ ನಿರ್ಭಯಾ ಪ್ರಕರಣದ ಪ್ರಮುಖ ಅಪರಾಧಿ ಮುಖೇಶ್ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ತುರ್ತುವಿಚಾರಣೆಗೆಗಳ ಪಟ್ಟಿಯಲ್ಲಿ ಸೇರಿಸುವಂತೆ ಸುಪ್ರೀಂಕೋರ್ಟ್ ಮುಖ್ಯ ನಾಯಮೂರ್ತಿ ವಕೀಲರಿಗೆ ಸೂಚನೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ ಬೊಬ್ಡೆ ಅವರು ಮುಖೇಶ್ಸಿಂಗ್ ಪರ ವಾದ ಮಾಡುತ್ತಿರುವ ವಕೀಲರಿಗೆ ಅರ್ಜಿಯನ್ನು ತುರ್ತು ವಿಚಾರಣೆಗಳ ಪಟ್ಟಿಗೆ ಸೇರಿಸುವಂತೆ ಸೂಚಿಸಿದರು.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ಮುಖೇಶ್ಸಿಂಗ್ ಸಲ್ಲಿಸಿದ್ದ ದಯಾ ಅರ್ಜಿಯನ್ನು ಕೇವಲ 4 ದಿನಗಳಲ್ಲಿ ತಿರಸ್ಕರಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಆತ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಿದ್ದಾನೆ.
ಶತ್ರುಘ್ನ ಚೌಹಾನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಅಪರಾಧಿ ಮುಖೇಶ್ಸಿಂಗ್ ಉಲ್ಲೇಖಿಸಿ ನ್ಯಾಯ ನೀಡುವಂತೆ ಮನವಿ ಸಲ್ಲಿಸಿದ್ದಾನೆ. (ಏಜೆನ್ಸೀಸ್)