More

    ದಯಾ ಅರ್ಜಿ ವಜಾಗೊಳಿಸಿದ ಪ್ರಕರಣವನ್ನು ತುರ್ತು ವಿಚಾರಣೆ ನಡೆಸಲು ಒಪ್ಪಿದ ಸುಪ್ರೀಂ ಕೋರ್ಟ್​

    ನವದೆಹಲಿ: ರಾಷ್ಟ್ರಪತಿಗಳು ದಯಾ ಅರ್ಜಿ ವಜಾಗೊಳಿಸಿದ್ದನ್ನು ಪ್ರಶ್ನಿಸಿ ತುರ್ತು ವಿಚಾರಣೆ ನಡೆಸುವಂತೆ ಕೋರಿ ನಿರ್ಭಯಾ ಪ್ರಕರಣದ ಪ್ರಮುಖ ಅಪರಾಧಿ ಮುಖೇಶ್​ಸಿಂಗ್​ ಸಲ್ಲಿಸಿದ್ದ ಅರ್ಜಿಯನ್ನು ತುರ್ತುವಿಚಾರಣೆಗೆಗಳ ಪಟ್ಟಿಯಲ್ಲಿ ಸೇರಿಸುವಂತೆ ಸುಪ್ರೀಂಕೋರ್ಟ್​ ಮುಖ್ಯ ನಾಯಮೂರ್ತಿ ವಕೀಲರಿಗೆ ಸೂಚನೆ ನೀಡಿದ್ದಾರೆ.

    ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಶರದ್​ ಅರವಿಂದ ಬೊಬ್ಡೆ ಅವರು ಮುಖೇಶ್​ಸಿಂಗ್​ ಪರ ವಾದ ಮಾಡುತ್ತಿರುವ ವಕೀಲರಿಗೆ ಅರ್ಜಿಯನ್ನು ತುರ್ತು ವಿಚಾರಣೆಗಳ ಪಟ್ಟಿಗೆ ಸೇರಿಸುವಂತೆ ಸೂಚಿಸಿದರು.

    ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರು, ಮುಖೇಶ್​ಸಿಂಗ್​ ಸಲ್ಲಿಸಿದ್ದ ದಯಾ ಅರ್ಜಿಯನ್ನು ಕೇವಲ 4 ದಿನಗಳಲ್ಲಿ ತಿರಸ್ಕರಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಆತ ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದಾನೆ.

    ಶತ್ರುಘ್ನ ಚೌಹಾನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ನೀಡಿರುವ ತೀರ್ಪನ್ನು ಅಪರಾಧಿ ಮುಖೇಶ್​ಸಿಂಗ್​ ಉಲ್ಲೇಖಿಸಿ ನ್ಯಾಯ ನೀಡುವಂತೆ ಮನವಿ ಸಲ್ಲಿಸಿದ್ದಾನೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts