ನವದೆಹಲಿ: ಮಧ್ಯ ಪ್ರದೇಶ ಸಿಎಂ ಕಮಲ್ನಾಥ್ ನಾಳೆ ಸಂಜೆ 5 ಗಂಟೆಯೊಳಗೆ (ಮಾ.20) ವಿಶ್ವಾಸಮತ ಸಾಬೀತುಪಡಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.
ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು ಕೂಡಲೇ ವಿಶ್ವಾಸಮತ ಯಾಚನೆಗೆ ಆದೇಶ ನೀಡಬೇಕು ಎಂದು ಬಿಜೆಪಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತೀರ್ಪು ನೀಡಿದೆ. ನ್ಯಾ.ಡಿ.ವೈ. ಚಂದ್ರಚೂಡ್ ಮತ್ತು ನ್ಯಾ.ಹೇಮಂತ್ ಗುಪ್ತಾ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿತು.
ಕಾಂಗ್ರೆಸ್ನ 16 ಮಂದಿ ಬಂಡಾಯ ಶಾಸಕರು ಬೆಂಗಳೂರಿನ ರೆಸಾರ್ಟ್ನಲ್ಲಿ ಬೀಡುಬಿಟ್ಟಿದ್ದಾರೆ. ಅವರು ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಂಡರೆ ಅವರು ಭೋಪಾಲ್ಗೆ ಮರಳಲು ಅವಕಾಶ ಕಲ್ಪಿಸಬೇಕು. ಈ ಶಾಸಕರ ಭದ್ರತೆಯನ್ನು ಕರ್ನಾಟಕ ಡಿಜಿಪಿ ಹಾಗೂ ಮಧ್ಯ ಪ್ರದೇಶದ ಡಿಜಿಪಿ ವಹಿಸಿಕೊಳ್ಳಬೇಕು ಎಂದು ಕೋರ್ಟ್ ಆದೇಶ ನೀಡಿದೆ.
ಕಾಂಗ್ರೆಸ್ ಪರ ಹಿರಿಯ ವಕೀಲ ದುಷ್ಯಂತ ದವೆ, ಬಿಜೆಪಿ ಪರ ವಕೀಲ ಮುಕುಲ್ ರೋಹಟಗಿ, ಬಂಡಾಯ ಶಾಸಕರ ಪರ ಮಣಿಂದರ್ ಸಿಂಗ್ ವಾದ ಮಂಡಿಸಿದರು. (ಏಜೆನ್ಸೀಸ್)
ಇಂದು ವಿಶ್ವಾಸಮತಕ್ಕೆ ಸುಪ್ರೀಂ ಆದೇಶ?: ಕರ್ನಾಟಕ, ಮಹಾರಾಷ್ಟ್ರ ಬಳಿಕ ಸುಪ್ರೀಂನಲ್ಲಿ ಮತ್ತೊಂದು ಪ್ರಕರಣದ ವಿಚಾರಣೆ