ಅಕ್ರಮ ಮಸೀದಿ ಕೆಡವಲು ಹೈಕೋರ್ಟ್ ಆದೇಶಿಸಿದ್ದ ತೀರ್ಪನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

blank

ನವದೆಹಲಿ: ಸರ್ಕಾರಿ ಜಾಗ ಒತ್ತುವರಿ ಮಾಡಿ ನಿರ್ಮಿಸಿರುವ ಮಸೀದಿ ಮತ್ತು ಮದ್ರಸಾವನ್ನು ಕೆಡವಿ ಹಾಕಲು ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

blank

ಚೆನ್ನೈನ ಕೊಯಂಬೆಡುವಿನಲ್ಲಿರುವ ಪ್ರಸಿದ್ಧ ಮಸೀದಿ ಮತ್ತು ಮದರಸಾವನ್ನು ಕೆಡವಲು ನೀಡಿರುವ ಹೈಕೋರ್ಟ್ ಆದೇಶದ ವಿರುದ್ಧ ಮಸ್ಜಿದ್-ಎ-ಹಿದಯ್ ಮತ್ತು ಮದರಸಾ ಕಡೆಯವರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ ಈ ಪ್ರಕರಣದ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಮಸೀದಿ ಮತ್ತು ಮದರಸಾವನ್ನು ಕೆಡವಲು ಹೈಕೋರ್ಟ್ ನೀಡಿದ ಆದೇಶದ ಕುರಿತು ಯಾವುದೇ ರೀತಿಯಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.

ಇದನ್ನೂ ಓದಿ: ಪೋರ್ನ್ ಸೈಟ್‌ಗೆ ಸೇರಿದ ಐದೇ ನಿಮಿಷದಲ್ಲಿ ನಟಿಯ ಎಲ್ಲ ಸಾಲ ಸೆಟ್ಲ್!

ಆ ಮೂಲಕ ಮಸೀದಿಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದ್ದು, ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಅನುಮೋದಿಸಿದೆ. ಈ ಕಟ್ಟಡವನ್ನು ಸಂಪೂರ್ಣವಾಗಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ.

ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರಿದ್ದ ನ್ಯಾಯ ಪೀಠವು ನಿಗದಿತ ಭೂಮಿಯಲ್ಲಿರುವ ಕಟ್ಟಡಗಳನ್ನು ಅಂದರೆ ಮಸೀದಿ ಮತ್ತು ಮದರಸಾಗಳನ್ನು ಕೆಡವಿ ಹಾಕಲು ಮೇ 31 ರವರೆಗೆ ಕಾಲಾವಕಾಶ ನೀಡಿದೆ. ಅಲ್ಲದೇ, ಇದರಲ್ಲಿ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆಯದೆ ಮಸೀದಿಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಪರಿಗಣಿಸಲಾಗಿದೆ.

ಸಾರ್ವಜನಿಕ ಸ್ಥಳಗಳು ಅಥವಾ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾದ ಧಾರ್ಮಿಕ ಸ್ಥಳಗಳನ್ನು ತೆಗೆದುಹಾಕಲು ತನ್ನ ಹಳೆಯ ಆದೇಶವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್, ಅಂತಹ ಅಕ್ರಮ ನಿರ್ಮಾಣಗಳನ್ನು ತೆಗೆದುಹಾಕುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದೆ. ಪ್ರಕರಣದ ವಿಚಾರಣೆಯ ವೇಳೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, ಅಕ್ರಮವಾಗಿ ನಿರ್ಮಿಸಲಾದ ಕಟ್ಟಡವು ಧಾರ್ಮಿಕ ಶಿಕ್ಷಣದ ಸ್ಥಳವಾಗಲು ಸಾಧ್ಯವಿಲ್ಲ ಎಂದು ಹೇಳಿದೆ.

ಮಸೀದಿಯನ್ನು ನಿರ್ಮಿಸಿರುವ ಭೂಮಿ ಚೆನ್ನೈ ಮಹಾನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದೆ. ಅರ್ಜಿದಾರರ ಸಂಘಟನೆಯು ಅಕ್ರಮ ಆಸ್ತಿದಾರ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅವರು ಕಟ್ಟಡದ ಯೋಜನೆಯ ಅನುಮೋದನೆಗೆ ಎಂದಿಗೂ ಅರ್ಜಿ ಸಲ್ಲಿಸಲಿಲ್ಲ. ಹೀಗಾಗಿ ಕಾಮಗಾರಿ ಸಂಪೂರ್ಣ ಅಕ್ರಮವಾಗಿದೆ. ಡಿಸೆಂಬರ್ 9, 2020 ರಂದು ಅಧಿಕಾರಿಗಳು ಸೂಚನೆ ನೀಡಿದ್ದರೂ, ನಿರ್ಮಾಣವನ್ನು ಮುಂದುವರೆಸಲಾಯಿತು ಎಂದು ನ್ಯಾಯಾಲಯ ಹೇಳಿದೆ.

ಸುಪ್ರೀಂಕೋರ್ಟ್‌ ವಿಚಾರಣೆಯ ವೇಳೆ ಅರ್ಜಿದಾರ ಹಿದಯ್ ಮುಸ್ಲಿಂ ವೆಲ್ಫೇರ್ ಟ್ರಸ್ಟ್‌ನ ವಕೀಲರು ಮಸೀದಿ ಕಟ್ಟಡವನ್ನು ತೆಗೆದುಹಾಕುವ ನವೆಂಬರ್ 2023 ರ ಹೈಕೋರ್ಟ್‌ನ ಆದೇಶವನ್ನು ವಿರೋಧಿಸಿದಾಗ, ವಿಚಾರಣೆಯ ಸಮಯದಲ್ಲಿ ಸುಪ್ರೀಂ ಕೋರ್ಟ್ ಸಾರ್ವಜನಿಕವಾಗಿ ಯಾರೂ ಬೇಡ ಎಂದು ಈ ಹಿಂದೆ ಆದೇಶಿಸಿದೆ. ಅಲ್ಲದೇ ಆ ಜಾಗದಲ್ಲಿ ದೇವಸ್ಥಾನ, ಮಸೀದಿ ಅಥವಾ ಇನ್ನೇನಾದರೂ ಅಕ್ರಮ ನಿರ್ಮಾಣವಾಗಿದ್ದರೆ ಅದನ್ನೂ ಕೆಡವಬೇಕು. ಎಲ್ಲಾ ಹೈಕೋರ್ಟ್‌ಗಳು ಆ ಆದೇಶವನ್ನು ಮೇಲ್ವಿಚಾರಣೆ ಮಾಡುತ್ತಿವೆ ಮತ್ತು ರಾಜ್ಯ ಸರ್ಕಾರಗಳು ಆ ನಿಟ್ಟಿನಲ್ಲಿ ಸೂಕ್ತ ಸೂಚನೆಗಳನ್ನು ನೀಡುತ್ತವೆ ಎಂದಿದೆ.

‘ಅದೇ ನನಗೆ ಬೇಕು.. ನಾನು ತಾಯಿಯಾಗಬೇಕು’..! ನಟಿ ಶೋಭಿತಾ ಹೇಳಿಕೆ ವೈರಲ್‌

Share This Article

ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water

Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…