ಲಖನೌ: ಉತ್ತರ ಪ್ರದೇಶದ ಐದು ಪ್ರಮುಖ ನಗರಗಳಲ್ಲಿ ಒಂದು ವಾರದ ಕಾಲ ಲಾಕ್ಡೌನ್ ಘೋಷಿಸಿದ್ದ ಅಲಹಾಬಾದ್ ಹೈ ಕೋರ್ಟ್ನ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಲಾಕ್ಡೌನ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಹಿನ್ನೆಲೆಯಲ್ಲಿ ತಡೆ ನೀಡಲಾಗಿದೆ.
ಏಪ್ರಿಲ್ 19ರಿಂದ 26ರವರೆಗೆ ವಾರಣಾಸಿ, ಲಖನೌ, ಕಾನ್ಪುರ, ಗೋರಕ್ಪುರ ಮತ್ತು ಪ್ರಯಾಗ್ರಾಜ್ನಲ್ಲಿ ಲಾಕ್ಡೌನ್ ಮಾಡಬೇಕೆಂದು ಅಲಹಾಬಾದ್ ಹೈ ಕೋರ್ಟ್ ಸೋಮವಾರ ಸಂಜೆ ಆದೇಶ ಹೊರಡಿಸಿತ್ತು. ಆದರೆ ಈ ರೀತಿಯ ಆದೇಶದಿಂದ ಈ ನಗರಗಳ ಬಡವರ ಬದುಕಿಗೆ ಹೊಡೆತ ಬೀಳಲಿದೆ ಎಂದು ರಾಜ್ಯ ಸರ್ಕಾರ ವಾದಿಸಿದೆ. ಹೈ ಕೋರ್ಟ್ ಹೇಳಿರುವ ಕ್ರಮಗಳಲ್ಲಿ ಹಲವನ್ನು ಈಗಾಗಲೇ ತೆಗೆದುಕೊಂಡಿರುವುದಾಗಿ ತಿಳಿಸಲಾಗಿದೆ. ಲಾಕ್ಡೌನ್ ಅವಶ್ಯಕತೆ ಸದ್ಯಕ್ಕೆ ಇಲ್ಲವೆಂದು ರಾಜ್ಯ ಸರ್ಕಾರದ ಪರ ವಕೀಲ ತುಷಾರ್ ಮೆಹ್ತಾ ವಾದಿಸಿದ್ದಾರೆ.
ಲಾಕ್ಡೌನ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ನಗರಗಳಲ್ಲಿ ಕರೊನಾ ಸೋಂಕಿನ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರವಾದ ವರದಿಯನ್ನು ಹೈ ಕೋರ್ಟ್ಗೆ ಸಲ್ಲಿಸುವಂತೆ ಸೂಚಿಸಲಾಗಿದೆ. (ಏಜೆನ್ಸೀಸ್)
ಬಿಗ್ಬಾಸ್ ಮನೆ ಖಾಲಿ ಖಾಲಿ! ಇದ್ದಕ್ಕಿದ್ದಂತೆ ಎಲ್ಲವನ್ನೂ ಹಿಂಪಡೆಯುವುದಕ್ಕೆ ಕಾರಣವೇನು?
ರಾತ್ರಿಯೆಲ್ಲ ನರಳಾಡಿ ಆಸ್ಪತ್ರೆಯಲ್ಲೇ ನೇಣಿಗೆ ಕೊರಳೊಡ್ಡಿದ ಕರೊನಾ ಸೋಂಕಿತ