More

    ಮುಂದಿನ 15 ದಿನದೊಳಗೆ ಮಹತ್ವದ ರಾಜಕೀಯ ಬೆಳವಣಿಗೆ: ಸುಪ್ರಿಯ ಸುಲೆ

    ಪುಣೆ: ಮುಂದಿನ 15 ದಿನಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರವಾದ ಬೆಳವಣಿಗೆಯಾಗಲಿದೆ ಎಂದು ಸಂಸದೆ ಸುಪ್ರಿಯಾ ಸುಲೆ ಭವಿಷ್ಯ ನುಡಿದಿದ್ಧಾರೆ. ‘

    ಎನ್​ಸಿಪಿ ನಾಯಕ ಅಜಿತ್​ ಪವಾರ್ ಮತ್ತು ಅವರ ಬೆಂಬಲಿಗ ಶಾಸಕರು ಬಿಜೆಪಿ ಸೇರ್ಪಡೆ ಕುರಿತ ಪ್ರಶ್ನೆಗೆ ಅವರ ಪ್ರತಿಕ್ರಿಯೆ ಹೀಗಿದೆ.

    ಮಹತ್ತರ ಬೆಳವಣಿಗೆ

    ಇನ್ನು ಎನ್​ಸಿಪಿ ನಾಯಕ ಅಜಿತ್​ ಪವಾರ್​ ಬಿಜೆಪಿ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿ ಮುಂದಿನ 15 ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ದೆಹಲಿ ರಾಜಕೀಯದಲ್ಲಿ ಮಹತ್ತರವಾದ ಬೆಳವಣಿಗೆಯಾಗಲಿದೆ ಎಂದು ಹೊಸ ಬಾಂಬ್​ ಒಂದನ್ನು ಸ್ಪೋಟಿಸಿದ್ಧಾರೆ.

    SupriyA sule

    ಇದನ್ನೂ ಓದಿ: ಐಟಿ ದಾಳಿ ವಿರೋಧಿಸಿ ಕೆಜಿಎಫ್​ ಬಾಬು ಮನೆ ಮುಂದೆ ಪ್ರತಿಭಟನೆ; ಪೊಲೀಸರಿಂದ ಲಾಠಿ ಚಾರ್ಜ್​

    ಎಲ್ಲದ್ದಕ್ಕೂ ನನ್ನ ಅಣ್ಣ(ಅಜಿತ್​ ಪವಾರ್​)ನನ್ನು ಏಕೆ ಹೊಣೆಗಾರನನ್ನಾಗಿ ಮಾಡಲಾಗುತ್ತಿದೆ. ಮಾರುಕಟ್ಟೆಯಲ್ಲಿ ಹೊಸ ಮುಖಬೆಲೆಯ ನಾಣ್ಯಕ್ಕೆ ಬೆಲೆ ಜಾಸ್ತಿ ಅದರ ಕುರಿತು ಎಲ್ಲರೂ ಹೆಚ್ಚಾಗಿ ಮಾತನಾಡುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ.

    ಇನ್ನು ಎನ್​ಸಿಪಿಯ ಕೆಲ ಶಾಸಕರು ಪಕ್ಷದ ನಾಯಕರ ಸಂಪರ್ಕಕ್ಕೆ ಸಿಗದೇ ಇರುವ ಕುರಿತು ಪ್ರತಿಕ್ರಿಯಿಸಿ ಎಲ್ಲಾರು ನಮ್ಮ ಸಂಪರ್ಕದಲ್ಲಿದ್ಧಾರೆ. ನಾನೂ ಎಲ್ಲಾ ಶಾಸಕರೊಂದಿಗೆ ಇನ್ನೊಮ್ಮೆ ಮಾತನಾಡುತ್ತೇನೆ ಎಂದು ಸಂಸದೆ ಸುಪ್ರಿಯಾ ಸುಲೆ ತಿಳಿಸಿದ್ಧಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts