More

    ಸುರೇಶ್ ಕುಲಕರ್ಣಿಗೆ ‘ಪಾಂಚಜನ್ಯ ಪುರಸ್ಕಾರ’

    ಬೆಂಗಳೂರು: ಪಾಂಚಜನ್ಯ ಪ್ರತಿಷ್ಠಾನ ಕೊಡಮಾಡುವ 2023ನೇ ಸಾಲಿನ ‘ಪಾಂಚಜನ್ಯ ಪುರಸ್ಕಾರ’ಕ್ಕೆ ಧಾರವಾಡದ ನಿವೃತ್ತ ಮುಖ್ಯೋಪಾಧ್ಯಾಯ ಸುರೇಶ್ ವಿ. ಕುಲಕರ್ಣಿ ಅವರು ಆಯ್ಕೆಯಾಗಿದ್ದಾರೆ.

    ಶನಿವಾರ (ಡಿ.9) ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಜಯನಗರ 4ನೇ ಬ್ಲಾಕ್‌ನ ಯುವಪಥದ ವಿವೇಕ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಿಗದಿಯಾಗಿದೆ. ಆರ್.ವಿ.ಶಿಕ್ಷಣ ಸಮೂಹದ ನಿರ್ದೇಶಕ ಡಾ. ಟಿ.ವಿ.ರಾಜು ಅವರು ಪುರಸ್ಕೃತರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಿಎಚ್‌ಎಸ್ ಉನ್ನತಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ. ಕೆ.ಎಸ್.ಸಮೀರ ಸಿಂಹ, ಎಂಇಎಸ್ ಶಿಕ್ಷಣ ಸಮೂಹ ಶೈಕ್ಷಣಿಕ ನಿರ್ದೇಶಕ ಡಾ. ಎಚ್.ಎಸ್.ಗಣೇಶ ಭಟ್ಟ, ಪ್ರತಿಷ್ಠಾನ ಟ್ರಸ್ಟಿಗಳಾದ ಎಸ್.ವಿ.ಸುಬ್ರಹ್ಮಣ್ಯ, ವೆಂಕಟೇಶ ವೇದಾಂತಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರತಿಷ್ಠಾನದ gಗೌರವ ಕಾರ್ಯದರ್ಶಿಯವರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts