ಶರಣ ತತ್ವಗಳ ಅಧ್ಯಯನದಿಂದ ಜೀವನ ಸಾರ್ಥಕ

blank

ಕೂಡ್ಲಿಗಿ: ಶರಣರ ವಚನಗಳು ಮನುಷ್ಯನ ಅಂತರಂಗ ಮತ್ತು ಬಹಿರಂಗ ಶುದ್ಧಿ ಮಾಡುವ ಔಷಧಿಗಳಾಗಿವೆ ಎಂದು ತಹಸೀಲ್ದಾರ್ ಎಂ.ರೇಣುಕಾ ಹೇಳಿದರು.

blank

ಇದನ್ನೂ ಓದಿ: ಮಕ್ಕಳ ಕಲಿಕೆಯಲ್ಲಿ ಪಾಲಕರ ಜವಾಬ್ದಾರಿ : ಸಮಾಲೋಚನಾ ಸಭೆಯಲ್ಲಿ ಶರಣ ಕುಮಾರ ಹೇಳಿಕೆ

ಪಟ್ಟಣ ತಾಲೂಕು ಕಚೇರಿಯಲ್ಲಿ ಮಂಗಳವಾರ ಡಾ.ಫ.ಗು.ಹಳಕಟ್ಟಿ ಜಯಂತಿ ಹಾಗೂ ವಚನ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ದಿನನಿತ್ಯ ನಾವುಗಳು ವಚನಗಳ ಪಠಣ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ, ಶರಣ ತತ್ವಗಳನ್ನು ಅಧ್ಯಯನ ಮಾಡಿದರೆ ಶರಣರ ಜೀವನವಾಗುತ್ತದೆ.

ಇಂಥ ಮಾನವೀಯ ಮೌಲ್ಯಗಳ ಗಣಿಯಂತಿರುವ ವಚನಗಳನ್ನು ನಮಗೆ ಸಿಗುವಂತೆ ಮಾಡಿದ್ದು, ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರಾಗಿದ್ದಾರೆ. ಹಳಕಟ್ಟಿ ಯಾವ ವಿಶ್ವವಿದ್ಯಾಲಯಗಳು ಮಾಡಲಾಗದ ಬಹು ದೊಡ್ಡ ಸಾಧನೆಯನ್ನು ಮಾಡುವ ಮೂಲಕ ವಚನ ಸಂರಕ್ಷಣೆ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.

ಪ್ರಸ್ತುತ ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಅದಕ್ಕೆ ಸೂಕ್ತ ಪರಿಹಾರ ಒದಗಿಸುವ ಶಕ್ತಿ ವಚನ ಸಾಹಿತ್ಯ ಹೊಂದಿದೆ ಎಂದು ತಿಳಿಸಿದರು. 12ನೇ ಶತಮಾನದಲ್ಲಿ ಬಸವಣ್ಣನವರು ಎಲ್ಲ ಕಾಯಕ ಶರಣರನ್ನು ಒಗ್ಗೂಡಿಸಿದಂತೆ,

ವಚನಕಾರರ ಸಾಹಿತ್ಯವನ್ನು 20ನೇ ಶತಮಾನದಲ್ಲಿ ಒಗ್ಗೂಡಿಸಲು ಶ್ರಮಿಸಿದ ಡಾ.ಫ.ಗು.ಹಳಕಟ್ಟಿ ಅವರನ್ನು ಆಧುನಿಕ ಬಸವಣ್ಣ ಎಂದು ಕರೆದರೆ ತಪ್ಪಾಗಲಾರದು. ಇಂಥ ಶ್ರೇಷ್ಠ ಕಾಯಕಜೀವಿ ಹಳಕಟ್ಟಿ ಶರಣರು ಸದಾ ಸ್ಮರಿಸುವ ಕಾರ್ಯವಾಗಬೇಕು ಎಂದರು.

blank

ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ವೀರೇಶ್ ಅಂಗಡಿ, ಕರವೇ ತಾಲೂಕು ಅಧ್ಯಕ್ಷ ಕಾಟೇರ್ ಹಾಲೇಶ್, ಕಜಾಪ ತಾಲೂಕು ಅಧ್ಯಕ್ಷ ಕೆ.ಎಂ.ವೀರೇಶ್, ಉಪ ತಹಸೀಲ್ದಾರ್ ಎಸ್.ಚಂದ್ರಶೇಖರ, ಟಿಎಸ್‌ಐ ಡಾ.ಎಸ್.ಪಿ.ಪ್ರದೀಪ್ ಕುಮಾರ್, ಪಪಂ ಮುಖ್ಯಾಧಿಕಾರಿ ಫಿರೋಜ್ ಖಾನ್ ಇದ್ದರು.

Share This Article

ಪುಷ್ಯ ನಕ್ಷತ್ರಕ್ಕೆ ಸೂರ್ಯನ ಎಂಟ್ರಿ! ಈ ತಿಂಗಳು 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Astrology

Astrology : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಜನಿಸಿದ ರಾಶಿಚಕ್ರ ಚಿಹ್ನೆ ಮತ್ತು ನಕ್ಷತ್ರವು ಅವರ…

ಮುಖದ ಸೌಂದರ್ಯಕ್ಕೆ ಐಸ್​​ಕ್ಯೂಬ್.. ಕೂಲ್.. ಕೂಲ್! ಐಸ್‌ಕ್ಯೂಬ್‌ನಿಂದ ಸೌಂದರ್ಯದ ಆರೈಕೆ.. Ice Facial Benefits

Ice Facial Benefits:  ಮಹಿಳಯರು ಸೌಂದರ್ಯಪ್ರಿಯರು. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಹಾಗೂ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು  ಮಾರುಕಟ್ಟೆಯಲ್ಲಿ…

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…