ಶೃಂಗೇರಿ: ಶ್ರೀ ಶರದಾ ಪೀಠದಲ್ಲಿ ರಥಸಪ್ತಮಿ ಅಂಗವಾಗಿ ಶುಕ್ರವಾರ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಶ್ರೀಮಠದ ಆವರಣದಲ್ಲಿರುವ ಶ್ರೀ ನರಸಿಂಹಭಾರತೀ ಯಾಗಶಾಲೆಯಲ್ಲಿ ನಡೆದ ಸೂರ್ಯ ಹೋಮದ ಪೂರ್ಣಾಹುತಿಯಲ್ಲಿ ಜಗದ್ಗುರುಗಳು ಭಾಗಿಯಾದರು.
ಸಣ್ಣ ರಥದಲ್ಲಿ ಪ್ರತಿಷ್ಠಾಪಿಸಿದ ಸೂರ್ಯನಾರಾಯಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮಧ್ಯಾಹ್ನ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅವರು ಮೆಣಸೆ ಗ್ರಾಪಂ ವ್ಯಾಪ್ತಿಯಲ್ಲಿರುವ ಶ್ರೀ ಸೂರ್ಯನಾರಾಯಣ ದೇವರಿಗೆ ಪಂಚಾಮತ ಅಭಿಷೇಕ, ಲ-ಪುಷ್ಪಗಳನ್ನು ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.