More

    ಅಫ್ಘಾನಿಸ್ತಾನ ವಿರುದ್ಧದ ಸರಣಿಯಿಂದ ಸೂರ್ಯಕುಮಾರ್​ ಯಾದವ್​ ಔಟ್; ಕಾರಣ ಹೀಗಿದೆ

    ನವದೆಹಲಿ: ಇತ್ತೀಚಿಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್​ ಬಳಿಕ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗಳಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಸೂರ್ಯಕುಮಾರ್​ ಯಾದವ್​ ಕೆಲ ವಾರಗಳ ಕಾಲ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

    ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಫೀಲ್ಡಿಂಗ್​ ಮಾಡುವ ವೇಳೆ ಪಾದದ ಗಾಯಕ್ಕೆ ತುತ್ತಾಗಿದ್ದ ಸೂರ್ಯಕುಮಾರ್​ ಯಾದವ್​ ಜನವರಿ 11ರಂದು ಆರಂಭಗೊಳ್ಳಲಿರುವ ಅಫ್ಘಾನಿಸ್ತಾನ ವಿರುದ್ಧದ ಸರಣಿಯಿಂದ ಹೊರಬಿದ್ದಿದ್ದಾರೆ. ಅವರು ಚೇತರಿಸಿಕೊಳ್ಳಲು ಕನಿಷ್ಠ 7 ವಾರಗಳು ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.

    Injury

    ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಅವರನ್ನ ಸಿಎಂ ಮಾಡದ ಕಾಂಗ್ರೆಸ್ ಪಿಎಂ ಮಾಡ್ತಾರಾ?: ಕೆ.ಎಸ್. ಈಶ್ವರಪ್ಪ

    ಏಕದಿನ ವಿಶ್ವಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್​ ಮಾಡುವ ವೇಳೆ ಪಾದದ ಗಾಯಕ್ಕೆ ತುತ್ತಾಗಿದ್ದ ಹಾರ್ದಿಕ್​​​​​​ ಪಾಂಡ್ಯ ಸಂಪೂರ್ಣ ಚೇತರಿಸಿಕೊಳ್ಳದ ಕಾರಣ ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಗೈರಾಗುವ ಸಾಧ್ಯತೆ ದಟ್ಟವಾಗಿದೆ. ಒಂದು ವೇಳೆ ಹಾರ್ದಿಕ್​ ಹಾಗೂ ಸೂರ್ಯ ಇಬ್ಬರು ಗೈರಾದರೆ ರೋಹಿತ್​ ಶರ್ಮಾ ಅಥವಾ ರವೀಂದ್ರ ಜಡೇಜಾ ತಂಡವನ್ನು ಮುನ್ನಡೆಸುವ ಸಾಧ್ಯತೆ ದಟ್ಟವಾಗಿದೆ.

    ಸೂರ್ಯಕುಮಾರ್ ಸುಮಾರು 7 ವಾರಗಳ ಕಾಲ ಕ್ರಿಕೆಟ್ ಆಕ್ಷನ್‌ನಿಂದ ದೂರವಿರುತ್ತಾರೆ. ಹೀಗಾಗಿ ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ, ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿಗೆ ಒಳಗಾಗಬೇಕಾಗುತ್ತದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts