More

    ಕೊಲೆ ಪ್ರಕರಣದಲ್ಲಿ ಪೊಲೀಸ್ ಬಲೆಗೆ ಬಿದ್ದ ಎರಡು ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್

    ನವದೆಹಲಿ: ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಅವರ ಬಲಗೈ ಬಂಟ ಅಜಯ್ ಎಂಬಾತನನ್ನು ಪಂಜಾಬ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸುಶೀಲ್ ಕುಮಾರ್ ಅವರನ್ನು ಪಂಜಾಬ್ ಪೊಲೀಸರು ದೆಹಲಿ ಪೊಲೀಸರಿಗೆ ಒಪ್ಪಿಸಲಿದ್ದಾರೆ. ಇದಕ್ಕೂ ಮೊದಲು ದೆಹಲಿ ಕೋರ್ಟ್ ಸುಶೀಲ್ ಕುಮಾರ್‌ಗೆ ಜಾಮೀನು ನೀಡಲು ನಿರಾಕರಿಸಿತ್ತು.

    ಇದನ್ನೂ ಓದಿ: ಎಫ್ಐಎಚ್ ಅಧ್ಯಕ್ಷರಾಗಿ ನರೀಂದರ್ ಬಾತ್ರಾ ಪುನರಾಯ್ಕೆ,

    ಸುಶೀಲ್ ಕುಮಾರ್ 2008ರ ಬಿಜಿಂಗ್ ಹಾಗೂ 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದ್ದರು. ದೆಹಲಿಯ ಉತ್ತರ ಭಾಗದಲ್ಲಿರುವ ಚಾಸ್ಟ್ರಾಸಾಲ್ ಸ್ಟೇಡಿಯಂ ಹೊರಗೆ ಕುಸ್ತಿ ಪಟು ಸಾಗರ್ ರಾಣಾ ಅವರನ್ನು ಕೊಲೆಗೈದು ಹಾಗೂ ಆತನ ಎರಡು ಸ್ನೇಹಿತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿತ್ತು.

    ಇದನ್ನೂ ಓದಿ: ಕ್ರಿಕೆಟ್​ ಮಂಡಳಿ ವಿರುದ್ಧವೇ ಮುನಿಸಿಕೊಂಡ ಶ್ರೀಲಂಕಾ ಕ್ರಿಕೆಟಿಗರು,

    ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಶೀಲ್ ಹಾಗೂ ಸ್ನೇಹಿತರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಸಂತ್ರಸ್ಥರನ್ನು ವಿಚಾರಣೆಗೆ ಒಳಪಡಿಸಿದ್ದು, ಎಲ್ಲರೂ ಸುಶೀಲ್ ಕುಮಾರ್ ಹೆಸರನ್ನು ಹೇಳಿದ್ದಾರೆ ಎಂದು ವರದಿಯಾಗಿದೆ.

    ಭಾರತೀಯ ಬಾಕ್ಸರ್‌ಗಳಿದ್ದ ವಿಮಾನ, ದುಬೈನಲ್ಲಿ ಟಚ್‌ಡೌನ್ ಮಾಡಲು ಎರಡು ತಾಸು ವಿಳಂಬವಾಗಿದ್ಯಾಕೆ ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts