ಕಾರವಾರ: ಹೈಕೋರ್ಟ್ ಆದೇಶ ಹಾಗೂ ಇಲಾಖೆಯ ಮೇಲ್ಮನವಿ ಪ್ರಾಧಿಕಾರದ ಆದೇಶವನ್ನು ಸಮರ್ಪಕವಾಗಿ ಪಾಲಿಸದ ಕಾರಣ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜನಿಯರ್(ಇಇ) ರಾಜೀವ ನಾಯ್ಕ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಚೇತನ ಎಂ.ಅವರು ಈ ಆದೇಶ ಹೊರಡಿಸಿದ್ದಾರೆ. ರಾಜೀವ ನಾಯ್ಕ ಅವರಿಂದ ತೆರವಾದ ಸ್ಥಾನಕ್ಕೆ ಅಂಕೋಲಾ ಪಂಚಾಯಿತಿ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಮು ಗುನಗಿ ಅವರನ್ನು ನೇಮಿಸಿ ಆದೇಶಿಸಿದ್ದಾರೆ.
ಕಾರಣವೇನು..?
2024 ರ ಕರೆಯಲಾದ ಬಹುಗ್ರಾಮ ಕುಡಿಯುವ ನೀರು ಯೋಜನೆಯಂದರ ಟೆಂಡರ್ನ ತಾಂತ್ರಿಕ ಮೌಲ್ಯಮಾಪನ ಅಸಮರ್ಪಕವಾಗಿರುವ ಬಗ್ಗೆ ಗುತ್ತಿಗೆದಾರ ಅನಿಲ್ಕುಮಾರ್ ಶೆಟ್ಟಿ ಇಲಾಖೆಯ ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಮರು ತಾಂತ್ರಿಕ ಮೌಲ್ಯಮಾಪನ ಮಾಡುವಂತೆ ಮೇಲ್ಮನವಿ ಪ್ರಾಽಕಾರ ಇಇ ಸೂಚಿಸಿತ್ತು. ಆದರೆ, ಇಇ ರಾಜೀವ ನಾಯ್ಕ ಅವರು ಹೈಕೋರ್ಟ್ಗೆ ಹೋಗಿದ್ದರು. ಮೊದಲ ಆದೇಶದಲ್ಲಿ ಹೈಕೋರ್ಟ್ ರಾಜೀವ ನಾಯ್ಕ ಪರ ತೀರ್ಪು ನೀಡಿತ್ತು. ಆದರೆ, ಅನಿಲ್ ಕುಮಾರ್ ಶೆಟ್ಟಿ ಮೇಲ್ಮನವಿ ಸಲ್ಲಿಸಿದಾಗ ರಾಜೀವ ನಾಯ್ಕ ವಿರುದ್ಧ ತೀರ್ಪು ಹೊರ ಬಂದಿತ್ತು. ಆದರೂ ಆದೇಶ ಪಾಲನೆ ಮಾಡದ ರಾಜೀವ ನಾಯ್ಕ ತಾಂತ್ರಿಕ ಮೌಲ್ಯಮಾಪನ ಮಾಡುವ ಬದಲು ಮರು ಟೆಂಡರ್ ಕರೆದಿದ್ದರು ಎನ್ನಲಾಗಿದೆ. ರಾಜೀವ ನಾಯ್ಕ ಅವರು ಮೇಲ್ನೋಟಕ್ಕೆ ಕರ್ತವ್ಯ ಲೋಪ ಎಸಗಿರುವುದು ಸಾಬೀತಾಗಿದ್ದು, ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ಅಮಾನತು

You Might Also Like
ಪಿರಿಯಡ್ಸ್ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips
ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…
ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic
garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…
ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups
Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…