ಪೊಲೀಸ್ ಪೇದೆ ಅಮಾನತು

blank

ಬೆಂಗಳೂರು: ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಮಹಿಳಾ ಟೆಕ್ಕಿ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಕಾನ್‌ಸ್ಟೆಬಲ್‌ನನ್ನು ಅಮಾನತು ಮಾಡಲಾಗಿದೆ.

blank

ಬ್ಯಾಟರಾಯನಪುರ ಠಾಣೆಯ ಕಿರಣ್ ಅಮಾನತುಗೊಂಡವ. ಮೈಸೂರು ರಸ್ತೆ ಬಾಪೂಜಿನಗರದಲ್ಲಿ ನೆಲೆಸಿರುವ ಮಹಿಳಾ ಟೆಕ್ಕಿ, ಇತ್ತೀಚೆಗೆ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಪಾಸ್‌ಪೋರ್ಟ್ ಕಚೇರಿಯಿಂದ ಅರ್ಜಿ ಸ್ವೀಕರಿಸಿದ ಕಿರಣ್, ವೆರಿಫಿಕೇಷನ್ ನೆಪದಲ್ಲಿ ಯುವತಿಯ ಮನೆಗೆ 2-3 ಬಾರಿ ಹೋಗಿದ್ದ. ಇತ್ತೀಚೆಗೆ ಹಠಾತ್ ಮನೆಯೊಳಗೆ ಪ್ರವೇಶಿಸಿ ಅರ್ಧ ಬಾಗಿಲು ಮುಚ್ಚಿದ್ದ. ನಂತರ ಯುವತಿಗೆ, ‘ನಿನ್ನ ಅಣ್ಣ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾನೆ. ಇದನ್ನೇ ನೆಪವಾಗಿ ಇಟ್ಟುಕೊಂಡು ನಿನ್ನ ಪಾಸ್‌ಪೋರ್ಟ್ ರದ್ದು ಮಾಡಿಸುತ್ತೇನೆ. ನೀನು ನನಗೆ ಸಹಕರಿಸಬೇಕು. ಬಾಗಿಲು ಹಾಕು’ ಎಂದು ಕಾನ್‌ಸ್ಟೆಬಲ್ ತಾಕೀತು ಮಾಡಿದ ಎಂದು ಯುವತಿ ಆರೋಪಿಸಿದ್ದಾಳೆ.

blank

ಇದಕ್ಕೆ ಯುವತಿ ಒಪ್ಪದಿದ್ದಾಗ ತಾನೇ ಬಾಗಿಲು ಮುಚ್ಚಿದ್ದ. ‘ಯಾರಿಗೂ ಹೇಳಬೇಡ, ಒಂದೇ ಒಂದು ಸಲ ಅಪ್ಪಿಕೊಳ್ಳುತ್ತೇನೆ’ ಎಂದಿದ್ದ. ಇದೇ ವೇಳೆ ಮತ್ತೊಂದು ಕೊಠಡಿಯಲ್ಲಿ ಆಕೆಯ ಅಣ್ಣ ಇರುವುದನ್ನು ಗಮನಿಸಿದ ಕಿರಣ್, ‘ನಿನ್ನ ತಂಗಿ ನನ್ನ ತಂಗಿ ಇದ್ದಹಾಗೆ’ ಎಂದು ಹೇಳಿ ಹೊರಟುಹೋದ ಎಂದು ಆರೋಪಿಸಿದ ಯುವತಿ, ಪಶ್ಚಿಮ ವಿಭಾಗ ಡಿಸಿಪಿ ಎಸ್. ಗಿರೀಶ್‌ಗೆ ದೂರು ಸಲ್ಲಿಸಿದ್ದಳು.

Share This Article

ಪುಷ್ಯ ನಕ್ಷತ್ರಕ್ಕೆ ಸೂರ್ಯನ ಎಂಟ್ರಿ! ಈ ತಿಂಗಳು 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Astrology

Astrology : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಜನಿಸಿದ ರಾಶಿಚಕ್ರ ಚಿಹ್ನೆ ಮತ್ತು ನಕ್ಷತ್ರವು ಅವರ…

ಮುಖದ ಸೌಂದರ್ಯಕ್ಕೆ ಐಸ್​​ಕ್ಯೂಬ್.. ಕೂಲ್.. ಕೂಲ್! ಐಸ್‌ಕ್ಯೂಬ್‌ನಿಂದ ಸೌಂದರ್ಯದ ಆರೈಕೆ.. Ice Facial Benefits

Ice Facial Benefits:  ಮಹಿಳಯರು ಸೌಂದರ್ಯಪ್ರಿಯರು. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಹಾಗೂ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು  ಮಾರುಕಟ್ಟೆಯಲ್ಲಿ…

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…