ಚಿಕ್ಕಬಳ್ಳಾಪುರ: ಮುರಾರ್ಜಿ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ತನುಶ್ರೀ (14) ಸಾವಿಗೀಡಾದ ವಿದ್ಯಾರ್ಥಿನಿ. ಚಿಂತಾಮಣಿ ತಾಲೂಕಿನ ಗಡಿಗವಾರ್ಲಹಳ್ಳಿ ಮುರಾರ್ಜಿ ದೇಸಾಯಿ ಹಾಸ್ಟೆಲ್ನಲ್ಲಿ ಈ ಪ್ರಕರಣ ನಡೆದಿದೆ. ಈಕೆ ಕೋಡಿಗಲ್ ಗ್ರಾಮದ ನೈದಮ್ಮ-ನರಸಿಂಹಪ್ಪ ದಂಪತಿಯ ಪುತ್ರಿ.
ಇದನ್ನೂ ಓದಿ: ವೇದಗಳನ್ನು ಓದಿದವರು ದೊಡ್ಡವರಲ್ಲ, ವೇದನೆಯನ್ನು ಅರಿತವರು ದೊಡ್ಡವರು: ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್
ರಾತ್ರಿ ಊಟ ಮಾಡಿ ಮಲಗಿದ್ದ ತನುಶ್ರೀ ಬೆಳಗ್ಗೆ ಅಸ್ವಸ್ತಗೊಂಡಿದ್ದಳು. ನಂತರ ಹಾಸ್ಟೆಲ್ ಸಿಬ್ಬಂದಿ ಈಕೆಯನ್ನು ಕೆಂಚಾರ್ಲಹಳ್ಳಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದಳು. ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಅವರನ್ನು ಟೆರರಿಸ್ಟ್ ಅಂತ ಈಗಲೇ ಹೇಳಲು ಸಾಧ್ಯವಿಲ್ಲ: ಗೃಹಸಚಿವ ಪರಮೇಶ್ವರ್
ಮಕ್ಕಳನ್ನು ಡೌನ್ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!