ಕೊಲ್ಕತಾ : ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ನಂದೀಗ್ರಾಮ ಕ್ಷೇತ್ರದಿಂದ ಸ್ಪರ್ಧಿಸಲು ಟಿಎಂಸಿ ನಾಯಕಿ ಮತ್ತು ಸಿಎಂ ಮಮತಾ ಬ್ಯಾನರ್ಜಿ ಸಲ್ಲಿಸಿರುವ ನಾಮಪತ್ರಕ್ಕೆ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಆಕ್ಷೇಪ ಸಲ್ಲಿಸಿದ್ದಾರೆ. ಬ್ಯಾನರ್ಜಿ ಅವರು ತಮ್ಮ ವಿರುದ್ಧ ಇರುವ 6 ಕ್ರಿಮಿನಲ್ ಪ್ರಕರಣಗಳನ್ನು ಮರೆಮಾಚಿದ್ದಾರೆ ಎಂದು ಇತ್ತೀಚೆಗೆ ಟಿಎಂಸಿಯಿಂದ ಬಿಜೆಪಿ ಸೇರಿದ ಅಧಿಕಾರಿ, ಆರೋಪಿಸಿದ್ದಾರೆ.
“ಬ್ಯಾನರ್ಜಿ ಅವರು ಟಿಎಂಸಿ ಅಭ್ಯರ್ಥಿಯಾಗಿ ಸಲ್ಲಿಸಿರುವ ಅಫಿಡೆವಿಟ್ನಲ್ಲಿ ಅವರ ವಿರುದ್ಧ ಇರುವ ಆರು ಕ್ರಿಮಿನಲ್ ಮೊಕದ್ದಮೆಗಳ ಬಗ್ಗೆ ತಿಳಿಸಿಲ್ಲ. ಅಸ್ಸಾಂನಲ್ಲಿ 2018 ರಲ್ಲಿ ದಾಖಲಾಗಿರುವ ಐದು ಎಫ್.ಐ.ಆರ್.ಗಳು ಮತ್ತು ಒಂದು ಸಿಬಿಐ ಎಫ್.ಐ.ಆರ್. ಬಗ್ಗೆ ಅವರು ಯಾವುದೇ ಮಾಹಿತಿ ನೀಡಿಲ್ಲ” ಎಂದಿರುವ ಅಧಿಕಾರಿ, ಈ ಬಗ್ಗೆ ಎಲ್ಲ ಪುರಾವೆಗಳನ್ನು ಒದಗಿಸಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: ಕ್ರಿಕೆಟ್ ಆಟಗಾರನಂತೆ ಮೈದಾನಕ್ಕೆ ಹೋಗುತ್ತಿದ್ದ… ಆದರೆ ಮಾಡುತ್ತಿದ್ದುದು ಬೇರೆಯೇ ಕೆಲಸ !
ಟಿಎಂಸಿಯ ಹಿರಿಯ ನಾಯಕರಾಗಿದ್ದ ಸುವೇಂದು ಅಧಿಕಾರಿ, ಕಳೆದ ಡಿಸೆಂಬರ್ನಲ್ಲಿ ಬಿಜೆಪಿ ಸೇರಿದ್ದರು. ಈಗ ಬಿಜೆಪಿಯು ಅವರನ್ನು ನಂದೀಗ್ರಾಮದ ಅಭ್ಯರ್ಥಿಯಾಗಿ ಬ್ಯಾನರ್ಜಿ ವಿರುದ್ಧ ಕಣಕ್ಕಿಳಿಸಿದೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಧಿಕಾರಿ, “ಮೋದಿಜಿ ಆಗಲಿ, ಮಮತಾ ಜಿ ಆಗಲಿ, ನಾನಾಗಲಿ – ಎಲ್ಲರಿಗೂ ನಿಯಮಗಳು ಒಂದೇ. ನಾನು ಎಲ್ಲಾ ಪುರಾವೆ ಒದಗಿಸಿ ನನ್ನ ಕರ್ತವ್ಯ ಮಾಡಿದ್ದೇನೆ. ಚುನಾವಣಾ ಆಯೋಗವು ಇದನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ನಂಬಿದ್ದೇನೆ” ಎಂದರು. (ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
“ಪೆಟ್ಟು ಬಿದ್ದ ಹುಲಿ ಹೆಚ್ಚು ಅಪಾಯಕಾರಿ” : ಮಮತಾ ಬ್ಯಾನರ್ಜಿ ಎಚ್ಚರಿಕೆ
ಕರೊನಾ ನಿಯಮ ಉಲ್ಲಂಘನೆ : ಬಾಲಿವುಡ್ ನಟಿ ವಿರುದ್ಧ ಮುಂಬೈ ಪಾಲಿಕೆ ದೂರು
“ನನ್ನ ಹೆಲಿಕಾಪ್ಟರ್ ಕೆಟ್ಟಿತ್ತು… ಆದರೆ ನಾನದನ್ನು ಸಂಚು ಎನ್ನುವುದಿಲ್ಲ…”