ಕುಂಭಮೇಳವನ್ನು ಮುಕ್ತಾಯಗೊಳಿಸುವುದಾಗಿ ಘೋಷಿಸಿದ ಸ್ವಾಮಿ ಅವದೇಶಾನಂದ ಗಿರಿ

ಲಕ್ನೋ: ಕರೊನಾ ಹರಡುತ್ತಿರುವುದರಿಂದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಬೆನ್ನಲ್ಲೇ ಕುಂಭಮೇಳವನ್ನು ಮುಕ್ತಾಯಗೊಳಿಸಲಾಗುವುದು ಎಂದು ಜುನಾ ಅಖಾಡದ ಸ್ವಾಮಿ ಅವದೇಶಾನಂದ ಗಿರಿ ಅವರು ಘೋಷಣೆ ಮಾಡಿದ್ದಾರೆ. ಕೋವಿಡ್ ವಿರುದ್ಧ ನಮ್ಮ ಜನರ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದೆ. ಈಗಾಗಲೇ ಕುಂಭಮೇಳದ ದೇವತಾ ವಿಸರ್ಜನಾ ಕಾರ್ಯಕ್ರಮ ಮುಗಿದಿರುವುದರಿಂದ ಕುಂಭಮೇಳವನ್ನು ಇಲ್ಲಿಗೆ ಮೊಟಕುಗೊಳಿಸುವುದು ಸೂಕ್ತವಾಗಿದೆ ಎಂದು ಸ್ವಾಮಿ ಅವದೇಶಾನಂದ ಗಿರಿ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಅವದೇಶಾನಂದ ಗಿರಿ ಅವರು … Continue reading ಕುಂಭಮೇಳವನ್ನು ಮುಕ್ತಾಯಗೊಳಿಸುವುದಾಗಿ ಘೋಷಿಸಿದ ಸ್ವಾಮಿ ಅವದೇಶಾನಂದ ಗಿರಿ