More

    ಶ್ರೀ ಗುರುಲಿಂಗ ದೇವರ ಕಾರು ಡಿಕ್ಕಿ ಹೊಡೆದು ಪಲ್ಟಿ; ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವು…

    ಕಲಬುರಗಿ​: ಯಲಗೋಡ ಮಠದ ಶ್ರೀ ಗುರುಲಿಂಗ ದೇವರು ಸಂಚರಿಸುತ್ತಿದ್ದ ಫಾರ್ಚುನರ್ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಪಾದಚಾರಿಗಳಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಲಬುರಗಿ ತಾಲೂಕಿನ ಫರ್ತಾಬಾದ್ ಬಳಿ ಈ ಅಪಘಾತ ಸಂಭವಿಸಿದೆ.

    ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಪಾದಚಾರಿಗಳಾದ ಶಿವಶರಣಪ್ಪ ಮತ್ತು ಗುಂಡಮ್ಮ ಎಂಬಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
    ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಯಲಗೋಡ ಗ್ರಾಮದಲ್ಲಿ ಸಾಗುತ್ತಿದ್ದಾಗ ಈ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದ್ದು, ನಂತರ ಪಲ್ಟಿಯಾಗಿ ಬಿದ್ದಿದೆ. ಕಾರಿನಲ್ಲಿದ್ದ ಶ್ರೀಗಳು ಹಾಗೂ ಚಾಲಕನಿಗೆ ಗಾಯಗಳಾಗಿವೆ. ಸ್ಥಳಕ್ಕೆ ಸಂಚಾರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

    ಮಂಗಳಾದೇವಿ ಮಡಿಲಲ್ಲಿ ರಕ್ತಚರಿತೆ: ಗರುಡ ಗಮನ, ವೃಷಭ ವಾಹನ ಸಿನಿಮಾ ವಿಮರ್ಶೆ

    ಬಿಡಿಎನಲ್ಲಿ ಭಾರಿ ಭ್ರಷ್ಟಾಚಾರ?; ಎಸಿಬಿಯ 67 ಮಂದಿಯಿಂದ ಏಕಕಾಲಕ್ಕೆ ದಾಳಿ, ತನಿಖೆ ಇನ್ನೂ ಪ್ರಗತಿಯಲ್ಲಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts