ಶ್ರೀ ಗುರುಲಿಂಗ ದೇವರ ಕಾರು ಡಿಕ್ಕಿ ಹೊಡೆದು ಪಲ್ಟಿ; ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವು…

ಕಲಬುರಗಿ​: ಯಲಗೋಡ ಮಠದ ಶ್ರೀ ಗುರುಲಿಂಗ ದೇವರು ಸಂಚರಿಸುತ್ತಿದ್ದ ಫಾರ್ಚುನರ್ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಪಾದಚಾರಿಗಳಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಲಬುರಗಿ ತಾಲೂಕಿನ ಫರ್ತಾಬಾದ್ ಬಳಿ ಈ ಅಪಘಾತ ಸಂಭವಿಸಿದೆ. ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಪಾದಚಾರಿಗಳಾದ ಶಿವಶರಣಪ್ಪ ಮತ್ತು ಗುಂಡಮ್ಮ ಎಂಬಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಯಲಗೋಡ ಗ್ರಾಮದಲ್ಲಿ ಸಾಗುತ್ತಿದ್ದಾಗ ಈ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದ್ದು, ನಂತರ ಪಲ್ಟಿಯಾಗಿ ಬಿದ್ದಿದೆ. ಕಾರಿನಲ್ಲಿದ್ದ ಶ್ರೀಗಳು ಹಾಗೂ ಚಾಲಕನಿಗೆ ಗಾಯಗಳಾಗಿವೆ. … Continue reading ಶ್ರೀ ಗುರುಲಿಂಗ ದೇವರ ಕಾರು ಡಿಕ್ಕಿ ಹೊಡೆದು ಪಲ್ಟಿ; ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವು…