ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದವೀಗ ಕನಕರ ತನಕ ತಲುಪಿದ್ದು, ಸ್ವಾಮೀಜಿಯೊಬ್ಬರು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ತಮ್ಮ ಆಕ್ಷೇಪಣೆ ತಿಳಿಸಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಹೌದು.. ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಲೋಪವಾಗಿದೆ ಎಂದು ಹೇಳಿ ಕಾಗಿನೆಲೆ ಮಠದ ಶ್ರೀನಿರಂಜನಾನಂದಪುರಿ ಸ್ವಾಮೀಜಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು, ಮನವಿ ಪತ್ರವೊಂದನ್ನು ಸಲ್ಲಿಸಿದ್ದಾರೆ.
ಒಂಬತ್ತನೇ ತರಗತಿಯ ಸಮಾಜವಿಜ್ಞಾನ ಪಾಠದಲ್ಲಿ ಈ ಹಿಂದೆ ಕನಕದಾಸರ ಕುರಿತು ಒಂದು ಪುಟದ ವಿವರಣೆ ಇತ್ತು. ಆದರೆ ಪಠ್ಯಪರಿಷ್ಕರಣೆ ಬಳಿಕ ಅದನ್ನು ಒಂದು ಸಾಲಿಗೆ ಕಡಿತಗೊಳಿಸಲಾಗಿದೆ. ಇದನ್ನು ಈ ಮೊದಲಿನಂತೆ ವಿವರವಾಗಿ ಪುನಃ ಅಳವಡಿಸುವಂತೆ ಕ್ರಮಕೈಗೊಳ್ಳಲು ಸೂಚನೆ ನೀಡಬೇಕು ಎಂಬುದಾಗಿ ಸಿಎಂ ಅವರಲ್ಲಿ ಸ್ವಾಮೀಜಿ ಮನವಿ ಮಾಡಿಕೊಂಡಿದ್ದಾರೆ.
ಟೆಸ್ಟ್ ಡ್ರೈವ್ ವೇಳೆ ಮೂರನೇ ಮಹಡಿಯಿಂದ ಬಿದ್ದ ಕಾರು; ಇಬ್ಬರು ಸ್ಥಳದಲ್ಲೇ ಸಾವು..
ಕಾರಿನ ಗಾಜನ್ನು ಒರೆಸುತ್ತ ಫಾಸ್ಟ್ಯಾಗ್ ಹಣ ಕಬಳಿಸುವವರ ಹಾವಳಿ?; ಹೊರಬಿತ್ತು ಅಸಲಿಯತ್ತು…
ದ್ವಿಚಕ್ರ ವಾಹನಕ್ಕೆ ಮಾಜಿ ಶಾಸಕರ ಕಾರು ಡಿಕ್ಕಿ, ರೈತರೊಬ್ಬರ ಕಾಲು ಮುರಿತ..